ಕ್ರೀಡೆ

ಏಷ್ಯನ್‌ ಗೇಮ್ಸ್‌: ಕ್ರಿಕೆಟ್‌- ಬಾಂಗ್ಲಾ ಬಗ್ಗು ಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಭಾರತ

ಹಾಂಗ್‌ಝೌ: ಋತುರಾಜ್‌ ಗಾಯಕ್ವಾಡ್‌ ಸಾರಥ್ಯದ ಟೀಮ್ ಇಂಡಿಯಾ, 2023ರ ಸಾಲಿನ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ಗೆ ದಾಪುಗಾಲಿಟ್ಟಿದೆ. ಶುಕ್ರವಾರ (ಅ. 6) ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 9 ವಿಕೆಟ್‌ಗಳಿಂದ ಬಗ್ಗುಬಡಿದು ಫೈನಲ್‌ಗೆ ದಾಪುಗಾಲಿಟ್ಟಿದೆ.

ಇಲ್ಲಿನ ಪಿಂಗ್‌ಫೆಂಗ್‌ ಕ್ಯಾಂಪಸ್‌ ಕ್ರಿಕೆಟ್‌ ಫೀಲ್ಡ್‌ನಲ್ಲಿ ಶುಕ್ರವಾರ ನಡೆದ ಪಂದ್ಯತದಲ್ಲಿ ಟಾಸ್‌ ಗೆದ್ದ ಟೀಮ್ ಇಂಡಿಯಾ ಬೌಲಿಂಗ್‌ ಆಯ್ದುಕೊಂಡಿತು. ಬಾಂಗ್ಲಾ ಪರ ಆರಂಭಿಕ ಬ್ಯಾಟರ್‌ ಪರ್ವೇಝ್ ಹುಸೇನ್ ಎಮಾನ್ (23) ಮತ್ತು ಜಾಕರ್ ಅಲಿ (24*) ಅಲ್ಪ ಹೋರಾಟ ನಡೆಸಿದರು. ಟೀಮ್ ಇಂಡಿಯಾದ ಶಿಸ್ತಿನ ಬೌಲಿಂಗ್‌ ದಾಳಿ ಎದುರು ಕುಸಿದ ಬಾಂಗ್ಲಾ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 96 ರನ್‌ಗಳ ಅಲ್ಪ ಮೊತ್ತ ಕಲೆಹಾಕಲಷ್ಟೇ ಶಕ್ತವಾಯಿತು.
ಟೀಮ್ ಇಂಡಿಯಾ ಪರ ಸ್ಪಿನ್ನರ್‌ ಆರ್‌ ಸಾಯ್‌ ಕಿಶೋರ್‌ (12ಕ್ಕೆ 3) ಹೆಚ್ಚು ವಿಕೆಟ್‌ ಪಡೆದರು. ವಾಷಿಂಗ್ಟನ್‌ ಸುಂದರ್‌ (15ಕ್ಕೆ 2), ಸ್ಪಿನ್ನರ್‌ಗಳಾದ ತಿಲಕ್ ವರ್ಮಾ, ರವಿ ಬಿಷ್ಣೋಯ್ ಮತ್ತು ಶಹಬಾಝ್ ಅಹ್ಮದ್‌ಗೂ ವಿಕೆಟ್‌ ಪಡೆದರು.
ತಿಲಕ್‌-ಋತುರಾಜ್‌ ಅಬ್ಬರದ ಬ್ಯಾಟಿಂಗ್‌ :
ಸುಲಭದ ರನ್‌ಚೇಸ್‌ ಆರಂಭಿಸಿದ ಟೀಮ್ ಇಂಡಿಯಾ ಆರಂಭದಲ್ಲೇ ಸ್ಟಾರ್‌ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌ ವಿಕೆಟ್‌ ಕಳೆದುಕೊಂಡಿತು. ಮೊದಲ ಓವರತ್‌ನಲ್ಲೇ ವೇಗಿ ರೊಪಿನ್ ಮೊಂಡಲ್‌ಗೆ ವಿಕೆಟ್‌ ಒಪ್ಪಿಸಿ, ಶೂನ್ಯ ವಿಕೆಟ್‌ ಒಪ್ಪಿಸಿದರು.
ಬಳಿಕ ಎರಡನೇ ವಿಕೆಟ್‌ಗೆ ಜೊತೆಯಾದ ನಾಯಕ ಋತುರಾಜ್ ಗಾಯಕ್ವಾಡ್‌ ಮತ್ತು ತಿಲಕ್‌ ವರ್ಮಾ 56 ಎಸೆತಗಳಲ್ಲಿ ಮುರಿಯದ 97 ರನ್‌ಗಳ ಜೊತೆಯಾಟವಾಡುವ ಮೂಲಕ ಭಾರತ ತಂಡಕ್ಕೆ ಭರ್ಜರಿ ಜಯ ತಂದರು.
ಸ್ಪೋಟಕ ಬ್ಯಾಟಿಂಗ್‌ ಮಾಡಿದ ಋತುರಾಜ್‌, 26 ಎಸೆತಗಳಲ್ಲಿ 4 ಫೋರ್‌ ಮತ್ತು 3 ಸಿಕ್ಸರ್‌ಗಳೊಂದಿಗೆ ಅಜೇಯ 40 ರನ್‌ ಸಿಡಿಸಿದರು. ಯುವ ಎಡಗೈ ಬ್ಯಾಟರ್‌ ತಿಲಕ್ ವರ್ಮಾ, 26 ಎಸೆತಗಳಲ್ಲಿ 2 ಫೋರ್ ಮತ್ತು ಬರೋಬ್ಬರಿ 6 ಸಿಕ್ಸರ್‌ಗಳೊಂದಿಗೆ 55 ರನ್‌ ಸಿಡಿಸಿ ಔಟಾಗದೇ ಉಳಿದರು.
ಗೋಲ್ಡ್‌ ಮೆಡಲ್‌ ಸಲುವಾಘಿ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಭಾರತ ತಂಡಕ್ಕೆ ಸಾಂಕ್ರದಾಯಿಕ ಎದುರಾಳಿ ಪಾಕಿಸ್ತಾನ ಅಥವಾ ಅಫಘಾನಿಸ್ತಾನ ತಂಡದ ಸವಾಲು ಎದುರಾಗಲಿದೆ.

ಸಂಕ್ಷಿಪ್ತ ಸ್ಕೋರ್‌

ಬಾಂಗ್ಲಾದೇಶ: 20 ಓವರ್‌ಗಳಲ್ಲಿ 9 ವಿಕೆಟ್‌ಗೆ 96 ರನ್‌ (ಪರ್ವೇಝ್ ಹುಸೇನ್ ಎಮಾನ್‌ 23, ಜಾಕರ್‌ ಅಲಿ 24*, ರಕಿಬುಲ್ ಹಸನ್‌ 14; ಸಾಯ್‌ ಕಿಶೋರ್‌ 12ಕ್ಕೆ 3, ವಾಷಿಂಗ್ಟನ್‌ ಸುಂದರ್‌ 15ಕ್ಕೆ 2, ಅರ್ಷದೀಪ್ ಸಿಂಗ್ 10ಕ್ಕೆ 1).

ಟೀಮ್ ಇಂಡಿಯಾ: 9.4 ಓವರ್‌ಗಳಲ್ಲಿ 1 ವಿಕೆಟ್‌ಗೆ 97 ರನ್ (ಋತುರಾಜ್‌ ಗಾಯಕ್ವಾಡ್‌ ಅಜೇಯ 40, ತಿಲಕ್ ವರ್ಮಾ ಅಜೇಯ 55).
andolanait

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

49 mins ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

5 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

21 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

21 hours ago