ಕ್ರೀಡೆ

ಏಷ್ಯನ್ ಗೇಮ್ಸ್: ಭಾರತಕ್ಕೆ ಡಬಲ್ ಧಮಾಕ; 10,000 ಮೀಟರ್ ಓಟದಲ್ಲಿ ಬೆಳ್ಳಿ ಮತ್ತು ಕಂಚು!

ಹ್ಯಾಂಗ್‌ಝೌ: ಭಾರತದ ಅಥ್ಲೀಟ್‌ಗಳಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಪದಕಗಳನ್ನು ಗೆದ್ದಿದ್ದಾರೆ. ಶನಿವಾರ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ ಪುರುಷರ 10000 ಮೀಟರ್ಸ್ ಓಟದಲ್ಲಿ ಓಟಗಾರರಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದರು.

ಕಾರ್ತಿಕ್ 28:15.38 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಗೆದ್ದರೆ, ಗುಲ್ವೀರ್ 28:17.21 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಕಂಚಿನ ಪದಕ ಪಡೆದರು. ಇಬ್ಬರೂ ಭಾರತೀಯರು ಅಂತಿಮ 100 ಮೀಟರ್‌ನಲ್ಲಿ ಪದಕಕ್ಕಾಗಿ ಪೈಪೋಟಿಯಲ್ಲಿದ್ದಾಗ ಆಟಗಾರರು ಪರಸ್ಪರ ಡಿಕ್ಕಿ ಹೊಡೆದು ಬಿದ್ದರು. ಬಹ್ರೇನ್‌ನ ಬಿರ್ಹಾನು ಯಮತಾವ್ ಬಲೆವ್ 28:13.62 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ಗೆದ್ದರು.

ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಭಾರತೀಯ ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ. ಕ್ರೀಡಾಪಟುಗಳನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.

ಭಾರತದ ಪದಕ ಬೇಟೆ
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಇಲ್ಲಿಯವರೆಗೂ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನ ಪದಕದೊಂದಿಗೆ ಒಟ್ಟಾರೆ 38 ಪದಕಗಳನ್ನು ಗೆದ್ದಿದೆ.

andolanait

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

8 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

24 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

41 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

54 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago