ಹ್ಯಾಂಗ್ಝೌ: ಭಾರತದ ಅಥ್ಲೀಟ್ಗಳಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ ಪದಕಗಳನ್ನು ಗೆದ್ದಿದ್ದಾರೆ. ಶನಿವಾರ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ನ ಪುರುಷರ 10000 ಮೀಟರ್ಸ್ ಓಟದಲ್ಲಿ ಓಟಗಾರರಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದರು.
ಕಾರ್ತಿಕ್ 28:15.38 ಸೆಕೆಂಡ್ಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಗೆದ್ದರೆ, ಗುಲ್ವೀರ್ 28:17.21 ಸೆಕೆಂಡ್ಗಳಲ್ಲಿ ಗುರಿ ತಲುಪಿ ಕಂಚಿನ ಪದಕ ಪಡೆದರು. ಇಬ್ಬರೂ ಭಾರತೀಯರು ಅಂತಿಮ 100 ಮೀಟರ್ನಲ್ಲಿ ಪದಕಕ್ಕಾಗಿ ಪೈಪೋಟಿಯಲ್ಲಿದ್ದಾಗ ಆಟಗಾರರು ಪರಸ್ಪರ ಡಿಕ್ಕಿ ಹೊಡೆದು ಬಿದ್ದರು. ಬಹ್ರೇನ್ನ ಬಿರ್ಹಾನು ಯಮತಾವ್ ಬಲೆವ್ 28:13.62 ಸೆಕೆಂಡ್ಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ಗೆದ್ದರು.
ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಭಾರತೀಯ ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ. ಕ್ರೀಡಾಪಟುಗಳನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.
ಭಾರತದ ಪದಕ ಬೇಟೆ
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಇಲ್ಲಿಯವರೆಗೂ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನ ಪದಕದೊಂದಿಗೆ ಒಟ್ಟಾರೆ 38 ಪದಕಗಳನ್ನು ಗೆದ್ದಿದೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…