ಹ್ಯಾಂಗ್ಝೌ: ಭಾರತದ ಅಥ್ಲೀಟ್ಗಳಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ ಪದಕಗಳನ್ನು ಗೆದ್ದಿದ್ದಾರೆ. ಶನಿವಾರ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ನ ಪುರುಷರ 10000 ಮೀಟರ್ಸ್ ಓಟದಲ್ಲಿ ಓಟಗಾರರಾದ ಕಾರ್ತಿಕ್ ಕುಮಾರ್ ಮತ್ತು ಗುಲ್ವೀರ್ ಸಿಂಗ್ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದರು.
ಕಾರ್ತಿಕ್ 28:15.38 ಸೆಕೆಂಡ್ಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕ ಗೆದ್ದರೆ, ಗುಲ್ವೀರ್ 28:17.21 ಸೆಕೆಂಡ್ಗಳಲ್ಲಿ ಗುರಿ ತಲುಪಿ ಕಂಚಿನ ಪದಕ ಪಡೆದರು. ಇಬ್ಬರೂ ಭಾರತೀಯರು ಅಂತಿಮ 100 ಮೀಟರ್ನಲ್ಲಿ ಪದಕಕ್ಕಾಗಿ ಪೈಪೋಟಿಯಲ್ಲಿದ್ದಾಗ ಆಟಗಾರರು ಪರಸ್ಪರ ಡಿಕ್ಕಿ ಹೊಡೆದು ಬಿದ್ದರು. ಬಹ್ರೇನ್ನ ಬಿರ್ಹಾನು ಯಮತಾವ್ ಬಲೆವ್ 28:13.62 ಸೆಕೆಂಡ್ಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ಗೆದ್ದರು.
ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಭಾರತೀಯ ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ. ಕ್ರೀಡಾಪಟುಗಳನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.
ಭಾರತದ ಪದಕ ಬೇಟೆ
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಇಲ್ಲಿಯವರೆಗೂ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನ ಪದಕದೊಂದಿಗೆ ಒಟ್ಟಾರೆ 38 ಪದಕಗಳನ್ನು ಗೆದ್ದಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…