ಹ್ಯಾಂಗ್ಝೌ : ನಡೆಯುತ್ತಿರುವ ಏಷ್ಯನ್ ಗೇಮ್ಸ್ನ ಸೈಲಿಂಗ್ನಲ್ಲಿ (ನೌಕಾಯಾನ ಸ್ಪರ್ಧೆ) ಭಾರತ ಎರಡು ಪದಕಗಳನ್ನು ಗೆದ್ದುಕೊಂಡಿದೆ. ಮಂಗಳವಾರ ನಡೆದ ಈ ಸ್ಪರ್ಧೆಯ ಬಾಲಕಿಯ ವಿಭಾಗದಲ್ಲಿ 17ರ ಹರೆಯದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದರೆ, ಪುರುಷರ ವಿಭಾಗದಲ್ಲಿ ಇಯಾಬಾದ್ ಅಲಿ ಕಂಚಿನ ಪದಕ ಪಡೆದುಕೊಂಡರು.
ಪುರುಷರ ವಿಂಡ್ಸರ್ಫರ್ ಆರ್ಎಸ್: ಎಕ್ಸ್ ಈವೆಂಟ್ನಲ್ಲಿ ಇಯಾಬಾದ್ ಅಲಿ 52 ಅಂಕಗಳು ಮತ್ತು ನೆಟ್ ಸ್ಕೋರ್ನೊಂದಿಗೆ ಮೂರನೇ ಸ್ಥಾನ ಪಡೆದರು. ಈ ಮೂಲಕ ಸೈಲಿಂಗ್ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಡುವಲ್ಲಿ ಯಶಸ್ವಿಯಾದರು. ಇನ್ನು ಸ್ಪರ್ಧೆಯಲ್ಲಿ ಕೊರಿಯಾದ ವೊನ್ವೂ ಚೋ ಚಿನ್ನದ ಪದಕ ಗೆದ್ದರೆ, ಥಾಯ್ಲೆಂಡ್ನ ನಟ್ಟಾಫೊಂಗ್ ಫೋನೊಫ್ಫರತ್ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.
ಬಾಲಕಿಯರ ಡಿಂಗಿ ಐಎಲ್ಸಿಎ-4 ಸ್ಪರ್ಧೆಯಲ್ಲಿ 17 ವರ್ಷದ ನೇಹಾ ಎರಡನೇ ಸ್ಥಾನ ಪಡೆದು ಭಾರತಕ್ಕೆ ದಿನದ ಮೊದಲ ಪದಕವನ್ನು ತಂದುಕೊಟ್ಟರು. ಭೋಪಾಲ್ನ ನ್ಯಾಷನಲ್ ಸೈಲಿಂಗ್ ಸ್ಕೂಲ್ನ ಉದಯೋನ್ಮುಖ ನಾವಿಕೆಯಾಗಿ ಗುರುತಿಸಿಕೊಂಡಿರುವ ನೇಹಾ ಒಟ್ಟು 32 ಅಂಕಗಳೊಂದಿಗೆ ಗುರಿ ಮುಟ್ಟಿದ್ದರು. ಅಲ್ಲದೆ 27 ನೆಟ್ ಸ್ಕೋರ್ಗಳೊಂದಿಗೆ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.
ಈ ಸ್ಪರ್ಧೆಯಲ್ಲಿ ಥಾಯ್ಲೆಂಡ್ನ ನೊಪಾಸ್ಸೋರ್ನ್ ಖುನ್ಬೂಂಜಾನ್ ಚಿನ್ನ ಪದಕ ತಮ್ಮದಾಗಿಸಕೊಂಡರೆ, ಸಿಂಗಾಪುರದ ಕೀರಾ ಮೇರಿ ಕಾರ್ಲೈಲ್ ಕಂಚಿಗೆ ತೃಪ್ತಿಪಟ್ಟರು.
ಪ್ರಸ್ತುತ ಪದಕ ಪಟ್ಟಿಯಲ್ಲಿ ಭಾರತ ತಂಡವು 6ನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಒಟ್ಟು 3 ಚಿನ್ನದ ಪದಕ, 4 ಬೆಳ್ಳಿ ಪದಕ ಮತ್ತು 7 ಕಂಚಿನ ಪದಕಗಳನ್ನು ತೆಗೆದುಕೊಂಡಿದ್ದಾರೆ.
ಇನ್ನು 40 ಚಿನ್ನದ ಪದಕ, 21 ಬೆಳ್ಳಿ ಪದಕ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿರುವ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…