ಹ್ಯಾಂಗ್ಝೌ : ನಡೆಯುತ್ತಿರುವ ಏಷ್ಯನ್ ಗೇಮ್ಸ್ನ ಸೈಲಿಂಗ್ನಲ್ಲಿ (ನೌಕಾಯಾನ ಸ್ಪರ್ಧೆ) ಭಾರತ ಎರಡು ಪದಕಗಳನ್ನು ಗೆದ್ದುಕೊಂಡಿದೆ. ಮಂಗಳವಾರ ನಡೆದ ಈ ಸ್ಪರ್ಧೆಯ ಬಾಲಕಿಯ ವಿಭಾಗದಲ್ಲಿ 17ರ ಹರೆಯದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದರೆ, ಪುರುಷರ ವಿಭಾಗದಲ್ಲಿ ಇಯಾಬಾದ್ ಅಲಿ ಕಂಚಿನ ಪದಕ ಪಡೆದುಕೊಂಡರು.
ಪುರುಷರ ವಿಂಡ್ಸರ್ಫರ್ ಆರ್ಎಸ್: ಎಕ್ಸ್ ಈವೆಂಟ್ನಲ್ಲಿ ಇಯಾಬಾದ್ ಅಲಿ 52 ಅಂಕಗಳು ಮತ್ತು ನೆಟ್ ಸ್ಕೋರ್ನೊಂದಿಗೆ ಮೂರನೇ ಸ್ಥಾನ ಪಡೆದರು. ಈ ಮೂಲಕ ಸೈಲಿಂಗ್ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಡುವಲ್ಲಿ ಯಶಸ್ವಿಯಾದರು. ಇನ್ನು ಸ್ಪರ್ಧೆಯಲ್ಲಿ ಕೊರಿಯಾದ ವೊನ್ವೂ ಚೋ ಚಿನ್ನದ ಪದಕ ಗೆದ್ದರೆ, ಥಾಯ್ಲೆಂಡ್ನ ನಟ್ಟಾಫೊಂಗ್ ಫೋನೊಫ್ಫರತ್ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.
ಬಾಲಕಿಯರ ಡಿಂಗಿ ಐಎಲ್ಸಿಎ-4 ಸ್ಪರ್ಧೆಯಲ್ಲಿ 17 ವರ್ಷದ ನೇಹಾ ಎರಡನೇ ಸ್ಥಾನ ಪಡೆದು ಭಾರತಕ್ಕೆ ದಿನದ ಮೊದಲ ಪದಕವನ್ನು ತಂದುಕೊಟ್ಟರು. ಭೋಪಾಲ್ನ ನ್ಯಾಷನಲ್ ಸೈಲಿಂಗ್ ಸ್ಕೂಲ್ನ ಉದಯೋನ್ಮುಖ ನಾವಿಕೆಯಾಗಿ ಗುರುತಿಸಿಕೊಂಡಿರುವ ನೇಹಾ ಒಟ್ಟು 32 ಅಂಕಗಳೊಂದಿಗೆ ಗುರಿ ಮುಟ್ಟಿದ್ದರು. ಅಲ್ಲದೆ 27 ನೆಟ್ ಸ್ಕೋರ್ಗಳೊಂದಿಗೆ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.
ಈ ಸ್ಪರ್ಧೆಯಲ್ಲಿ ಥಾಯ್ಲೆಂಡ್ನ ನೊಪಾಸ್ಸೋರ್ನ್ ಖುನ್ಬೂಂಜಾನ್ ಚಿನ್ನ ಪದಕ ತಮ್ಮದಾಗಿಸಕೊಂಡರೆ, ಸಿಂಗಾಪುರದ ಕೀರಾ ಮೇರಿ ಕಾರ್ಲೈಲ್ ಕಂಚಿಗೆ ತೃಪ್ತಿಪಟ್ಟರು.
ಪ್ರಸ್ತುತ ಪದಕ ಪಟ್ಟಿಯಲ್ಲಿ ಭಾರತ ತಂಡವು 6ನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಒಟ್ಟು 3 ಚಿನ್ನದ ಪದಕ, 4 ಬೆಳ್ಳಿ ಪದಕ ಮತ್ತು 7 ಕಂಚಿನ ಪದಕಗಳನ್ನು ತೆಗೆದುಕೊಂಡಿದ್ದಾರೆ.
ಇನ್ನು 40 ಚಿನ್ನದ ಪದಕ, 21 ಬೆಳ್ಳಿ ಪದಕ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿರುವ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…