ಕ್ರೀಡೆ

ಏಷ್ಯನ್‌ ಗೇಮ್ಸ್‌: ಸೈಲಿಂಗ್​ ನಲ್ಲಿ ಕಂಚಿನ ಪದಕ ಗೆದ್ದ ಇಯಾಬಾದ್ ಅಲಿ

ಹ್ಯಾಂಗ್​ಝೌ : ನಡೆಯುತ್ತಿರುವ ಏಷ್ಯನ್ ಗೇಮ್ಸ್​ನ ಸೈಲಿಂಗ್​ನಲ್ಲಿ (ನೌಕಾಯಾನ ಸ್ಪರ್ಧೆ) ಭಾರತ ಎರಡು ಪದಕಗಳನ್ನು ಗೆದ್ದುಕೊಂಡಿದೆ. ಮಂಗಳವಾರ ನಡೆದ ಈ ಸ್ಪರ್ಧೆಯ ಬಾಲಕಿಯ ವಿಭಾಗದಲ್ಲಿ 17ರ ಹರೆಯದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದರೆ, ಪುರುಷರ ವಿಭಾಗದಲ್ಲಿ ಇಯಾಬಾದ್ ಅಲಿ ಕಂಚಿನ ಪದಕ ಪಡೆದುಕೊಂಡರು.

ಪುರುಷರ ವಿಂಡ್‌ಸರ್ಫರ್ ಆರ್‌ಎಸ್: ಎಕ್ಸ್ ಈವೆಂಟ್‌ನಲ್ಲಿ ಇಯಾಬಾದ್ ಅಲಿ 52 ಅಂಕಗಳು ಮತ್ತು ನೆಟ್​ ಸ್ಕೋರ್‌ನೊಂದಿಗೆ ಮೂರನೇ ಸ್ಥಾನ ಪಡೆದರು. ಈ ಮೂಲಕ ಸೈಲಿಂಗ್​ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಡುವಲ್ಲಿ ಯಶಸ್ವಿಯಾದರು. ಇನ್ನು ಸ್ಪರ್ಧೆಯಲ್ಲಿ ಕೊರಿಯಾದ ವೊನ್ವೂ ಚೋ ಚಿನ್ನದ ಪದಕ ಗೆದ್ದರೆ, ಥಾಯ್ಲೆಂಡ್‌ನ ನಟ್ಟಾಫೊಂಗ್ ಫೋನೊಫ್ಫರತ್ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.

ಬಾಲಕಿಯರ ಡಿಂಗಿ ಐಎಲ್‌ಸಿಎ-4 ಸ್ಪರ್ಧೆಯಲ್ಲಿ 17 ವರ್ಷದ ನೇಹಾ ಎರಡನೇ ಸ್ಥಾನ ಪಡೆದು ಭಾರತಕ್ಕೆ ದಿನದ ಮೊದಲ ಪದಕವನ್ನು ತಂದುಕೊಟ್ಟರು. ಭೋಪಾಲ್‌ನ ನ್ಯಾಷನಲ್ ಸೈಲಿಂಗ್ ಸ್ಕೂಲ್‌ನ ಉದಯೋನ್ಮುಖ ನಾವಿಕೆಯಾಗಿ ಗುರುತಿಸಿಕೊಂಡಿರುವ ನೇಹಾ ಒಟ್ಟು 32 ಅಂಕಗಳೊಂದಿಗೆ ಗುರಿ ಮುಟ್ಟಿದ್ದರು. ಅಲ್ಲದೆ 27 ನೆಟ್​ ಸ್ಕೋರ್​ಗಳೊಂದಿಗೆ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಈ ಸ್ಪರ್ಧೆಯಲ್ಲಿ ಥಾಯ್ಲೆಂಡ್‌ನ ನೊಪಾಸ್ಸೋರ್ನ್ ಖುನ್‌ಬೂಂಜಾನ್‌ ಚಿನ್ನ ಪದಕ ತಮ್ಮದಾಗಿಸಕೊಂಡರೆ, ಸಿಂಗಾಪುರದ ಕೀರಾ ಮೇರಿ ಕಾರ್ಲೈಲ್ ಕಂಚಿಗೆ ತೃಪ್ತಿಪಟ್ಟರು.

ಪ್ರಸ್ತುತ ಪದಕ ಪಟ್ಟಿಯಲ್ಲಿ ಭಾರತ ತಂಡವು 6ನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಒಟ್ಟು 3 ಚಿನ್ನದ ಪದಕ, 4 ಬೆಳ್ಳಿ ಪದಕ ಮತ್ತು 7 ಕಂಚಿನ ಪದಕಗಳನ್ನು ತೆಗೆದುಕೊಂಡಿದ್ದಾರೆ.

ಇನ್ನು 40 ಚಿನ್ನದ ಪದಕ, 21 ಬೆಳ್ಳಿ ಪದಕ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿರುವ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

8 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

10 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

12 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

13 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

14 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

14 hours ago