ಕ್ರೀಡೆ

ಏಷ್ಯನ್‌ ಗೇಮ್ಸ್‌: ಸೈಲಿಂಗ್​ ನಲ್ಲಿ ಕಂಚಿನ ಪದಕ ಗೆದ್ದ ಇಯಾಬಾದ್ ಅಲಿ

ಹ್ಯಾಂಗ್​ಝೌ : ನಡೆಯುತ್ತಿರುವ ಏಷ್ಯನ್ ಗೇಮ್ಸ್​ನ ಸೈಲಿಂಗ್​ನಲ್ಲಿ (ನೌಕಾಯಾನ ಸ್ಪರ್ಧೆ) ಭಾರತ ಎರಡು ಪದಕಗಳನ್ನು ಗೆದ್ದುಕೊಂಡಿದೆ. ಮಂಗಳವಾರ ನಡೆದ ಈ ಸ್ಪರ್ಧೆಯ ಬಾಲಕಿಯ ವಿಭಾಗದಲ್ಲಿ 17ರ ಹರೆಯದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದರೆ, ಪುರುಷರ ವಿಭಾಗದಲ್ಲಿ ಇಯಾಬಾದ್ ಅಲಿ ಕಂಚಿನ ಪದಕ ಪಡೆದುಕೊಂಡರು.

ಪುರುಷರ ವಿಂಡ್‌ಸರ್ಫರ್ ಆರ್‌ಎಸ್: ಎಕ್ಸ್ ಈವೆಂಟ್‌ನಲ್ಲಿ ಇಯಾಬಾದ್ ಅಲಿ 52 ಅಂಕಗಳು ಮತ್ತು ನೆಟ್​ ಸ್ಕೋರ್‌ನೊಂದಿಗೆ ಮೂರನೇ ಸ್ಥಾನ ಪಡೆದರು. ಈ ಮೂಲಕ ಸೈಲಿಂಗ್​ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಡುವಲ್ಲಿ ಯಶಸ್ವಿಯಾದರು. ಇನ್ನು ಸ್ಪರ್ಧೆಯಲ್ಲಿ ಕೊರಿಯಾದ ವೊನ್ವೂ ಚೋ ಚಿನ್ನದ ಪದಕ ಗೆದ್ದರೆ, ಥಾಯ್ಲೆಂಡ್‌ನ ನಟ್ಟಾಫೊಂಗ್ ಫೋನೊಫ್ಫರತ್ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.

ಬಾಲಕಿಯರ ಡಿಂಗಿ ಐಎಲ್‌ಸಿಎ-4 ಸ್ಪರ್ಧೆಯಲ್ಲಿ 17 ವರ್ಷದ ನೇಹಾ ಎರಡನೇ ಸ್ಥಾನ ಪಡೆದು ಭಾರತಕ್ಕೆ ದಿನದ ಮೊದಲ ಪದಕವನ್ನು ತಂದುಕೊಟ್ಟರು. ಭೋಪಾಲ್‌ನ ನ್ಯಾಷನಲ್ ಸೈಲಿಂಗ್ ಸ್ಕೂಲ್‌ನ ಉದಯೋನ್ಮುಖ ನಾವಿಕೆಯಾಗಿ ಗುರುತಿಸಿಕೊಂಡಿರುವ ನೇಹಾ ಒಟ್ಟು 32 ಅಂಕಗಳೊಂದಿಗೆ ಗುರಿ ಮುಟ್ಟಿದ್ದರು. ಅಲ್ಲದೆ 27 ನೆಟ್​ ಸ್ಕೋರ್​ಗಳೊಂದಿಗೆ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಈ ಸ್ಪರ್ಧೆಯಲ್ಲಿ ಥಾಯ್ಲೆಂಡ್‌ನ ನೊಪಾಸ್ಸೋರ್ನ್ ಖುನ್‌ಬೂಂಜಾನ್‌ ಚಿನ್ನ ಪದಕ ತಮ್ಮದಾಗಿಸಕೊಂಡರೆ, ಸಿಂಗಾಪುರದ ಕೀರಾ ಮೇರಿ ಕಾರ್ಲೈಲ್ ಕಂಚಿಗೆ ತೃಪ್ತಿಪಟ್ಟರು.

ಪ್ರಸ್ತುತ ಪದಕ ಪಟ್ಟಿಯಲ್ಲಿ ಭಾರತ ತಂಡವು 6ನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಒಟ್ಟು 3 ಚಿನ್ನದ ಪದಕ, 4 ಬೆಳ್ಳಿ ಪದಕ ಮತ್ತು 7 ಕಂಚಿನ ಪದಕಗಳನ್ನು ತೆಗೆದುಕೊಂಡಿದ್ದಾರೆ.

ಇನ್ನು 40 ಚಿನ್ನದ ಪದಕ, 21 ಬೆಳ್ಳಿ ಪದಕ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿರುವ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago