ಕ್ರೀಡೆ

ಏಷ್ಯನ್‌ ಗೇಮ್ಸ್‌: ಸೈಲಿಂಗ್​ ನಲ್ಲಿ ಕಂಚಿನ ಪದಕ ಗೆದ್ದ ಇಯಾಬಾದ್ ಅಲಿ

ಹ್ಯಾಂಗ್​ಝೌ : ನಡೆಯುತ್ತಿರುವ ಏಷ್ಯನ್ ಗೇಮ್ಸ್​ನ ಸೈಲಿಂಗ್​ನಲ್ಲಿ (ನೌಕಾಯಾನ ಸ್ಪರ್ಧೆ) ಭಾರತ ಎರಡು ಪದಕಗಳನ್ನು ಗೆದ್ದುಕೊಂಡಿದೆ. ಮಂಗಳವಾರ ನಡೆದ ಈ ಸ್ಪರ್ಧೆಯ ಬಾಲಕಿಯ ವಿಭಾಗದಲ್ಲಿ 17ರ ಹರೆಯದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದರೆ, ಪುರುಷರ ವಿಭಾಗದಲ್ಲಿ ಇಯಾಬಾದ್ ಅಲಿ ಕಂಚಿನ ಪದಕ ಪಡೆದುಕೊಂಡರು.

ಪುರುಷರ ವಿಂಡ್‌ಸರ್ಫರ್ ಆರ್‌ಎಸ್: ಎಕ್ಸ್ ಈವೆಂಟ್‌ನಲ್ಲಿ ಇಯಾಬಾದ್ ಅಲಿ 52 ಅಂಕಗಳು ಮತ್ತು ನೆಟ್​ ಸ್ಕೋರ್‌ನೊಂದಿಗೆ ಮೂರನೇ ಸ್ಥಾನ ಪಡೆದರು. ಈ ಮೂಲಕ ಸೈಲಿಂಗ್​ನಲ್ಲಿ ಭಾರತಕ್ಕೆ ಕಂಚಿನ ಪದಕ ತಂದುಕೊಡುವಲ್ಲಿ ಯಶಸ್ವಿಯಾದರು. ಇನ್ನು ಸ್ಪರ್ಧೆಯಲ್ಲಿ ಕೊರಿಯಾದ ವೊನ್ವೂ ಚೋ ಚಿನ್ನದ ಪದಕ ಗೆದ್ದರೆ, ಥಾಯ್ಲೆಂಡ್‌ನ ನಟ್ಟಾಫೊಂಗ್ ಫೋನೊಫ್ಫರತ್ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.

ಬಾಲಕಿಯರ ಡಿಂಗಿ ಐಎಲ್‌ಸಿಎ-4 ಸ್ಪರ್ಧೆಯಲ್ಲಿ 17 ವರ್ಷದ ನೇಹಾ ಎರಡನೇ ಸ್ಥಾನ ಪಡೆದು ಭಾರತಕ್ಕೆ ದಿನದ ಮೊದಲ ಪದಕವನ್ನು ತಂದುಕೊಟ್ಟರು. ಭೋಪಾಲ್‌ನ ನ್ಯಾಷನಲ್ ಸೈಲಿಂಗ್ ಸ್ಕೂಲ್‌ನ ಉದಯೋನ್ಮುಖ ನಾವಿಕೆಯಾಗಿ ಗುರುತಿಸಿಕೊಂಡಿರುವ ನೇಹಾ ಒಟ್ಟು 32 ಅಂಕಗಳೊಂದಿಗೆ ಗುರಿ ಮುಟ್ಟಿದ್ದರು. ಅಲ್ಲದೆ 27 ನೆಟ್​ ಸ್ಕೋರ್​ಗಳೊಂದಿಗೆ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಈ ಸ್ಪರ್ಧೆಯಲ್ಲಿ ಥಾಯ್ಲೆಂಡ್‌ನ ನೊಪಾಸ್ಸೋರ್ನ್ ಖುನ್‌ಬೂಂಜಾನ್‌ ಚಿನ್ನ ಪದಕ ತಮ್ಮದಾಗಿಸಕೊಂಡರೆ, ಸಿಂಗಾಪುರದ ಕೀರಾ ಮೇರಿ ಕಾರ್ಲೈಲ್ ಕಂಚಿಗೆ ತೃಪ್ತಿಪಟ್ಟರು.

ಪ್ರಸ್ತುತ ಪದಕ ಪಟ್ಟಿಯಲ್ಲಿ ಭಾರತ ತಂಡವು 6ನೇ ಸ್ಥಾನದಲ್ಲಿದೆ. ಭಾರತೀಯ ಕ್ರೀಡಾಪಟುಗಳು ಒಟ್ಟು 3 ಚಿನ್ನದ ಪದಕ, 4 ಬೆಳ್ಳಿ ಪದಕ ಮತ್ತು 7 ಕಂಚಿನ ಪದಕಗಳನ್ನು ತೆಗೆದುಕೊಂಡಿದ್ದಾರೆ.

ಇನ್ನು 40 ಚಿನ್ನದ ಪದಕ, 21 ಬೆಳ್ಳಿ ಪದಕ ಮತ್ತು 9 ಕಂಚಿನ ಪದಕಗಳನ್ನು ಗೆದ್ದಿರುವ ಚೀನಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago