ಕ್ರೀಡೆ

ಏಷ್ಯನ್ ಗೇಮ್ಸ್: ಭಾರತ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ!

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತ ಕ್ರಿಕೆಟ್ ತಂಡ ಚೊಚ್ಚಲ ಚಿನ್ನದ ಪದಕ ಗೆದ್ದಿದೆ. ಅಫ್ಘಾನಿಸ್ಥಾನದ ವಿರುದ್ಧ ಫೈನಲ್ಸ್ ಪಂದ್ಯ ಮಳೆಯ ಕಾರಣ ರದ್ದಾಗಿದ್ದು, ಹೆಚ್ಚಿನ ಶ್ರೇಣಿಯಲ್ಲಿ ಸ್ಥಾನ ಪಡೆದಿದ್ದರಿಂದ ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವನ್ನು ವಿಜೇತ ತಂಡ ಎಂದು ಘೋಷಿಸಲಾಗಿದೆ.

ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 18.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್​ ಕಲೆಹಾಕಿದಾಗ ಮಳೆ ಬರಲಾರಂಭಿಸಿತು.

ಧಾರಾಕಾರ ಸುರಿದ ಮಳೆಯಿಂದ ಮೈದಾನವು ಸಂಪೂರ್ಣ ಒದ್ದೆಯಾಗಿದ್ದು, ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲು ಅಂಪೈರ್​ಗಳು ನಿರ್ಧರಿಸಿದರು. ಅದರಂತೆ ಅಂತಿಮ ಹಣಾಹಣಿಯು ಮಳೆಗೆ ಅಹುತಿಯಾಯಿತು. ಇದಾಗ್ಯೂ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದ ಟೀಮ್ ಇಂಡಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು.

ಈ ಮೂಲಕ ಏಷ್ಯನ್ ಗೇಮ್ಸ್​ ಕ್ರಿಕೆಟ್​ನಲ್ಲಿ ಭಾರತ ತಂಡವು ಸ್ವರ್ಣ ಪದಕವನ್ನು ಗೆದ್ದುಕೊಂಡಿದೆ. ಇನ್ನು ರನ್ನರ್ ಅಪ್ ತಂಡ ಅಫ್ಘಾನಿಸ್ತಾನ್ ತಂಡವು ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದರೆ, ಬಾಂಗ್ಲಾದೇಶ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

andolanait

Recent Posts

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

1 min ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

2 mins ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

29 mins ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

33 mins ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

54 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

1 hour ago