ಕ್ರೀಡೆ

ಏಷ್ಯನ್ ಗೇಮ್ಸ್: ಭಾರತ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ!

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತ ಕ್ರಿಕೆಟ್ ತಂಡ ಚೊಚ್ಚಲ ಚಿನ್ನದ ಪದಕ ಗೆದ್ದಿದೆ. ಅಫ್ಘಾನಿಸ್ಥಾನದ ವಿರುದ್ಧ ಫೈನಲ್ಸ್ ಪಂದ್ಯ ಮಳೆಯ ಕಾರಣ ರದ್ದಾಗಿದ್ದು, ಹೆಚ್ಚಿನ ಶ್ರೇಣಿಯಲ್ಲಿ ಸ್ಥಾನ ಪಡೆದಿದ್ದರಿಂದ ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವನ್ನು ವಿಜೇತ ತಂಡ ಎಂದು ಘೋಷಿಸಲಾಗಿದೆ.

ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 18.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್​ ಕಲೆಹಾಕಿದಾಗ ಮಳೆ ಬರಲಾರಂಭಿಸಿತು.

ಧಾರಾಕಾರ ಸುರಿದ ಮಳೆಯಿಂದ ಮೈದಾನವು ಸಂಪೂರ್ಣ ಒದ್ದೆಯಾಗಿದ್ದು, ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲು ಅಂಪೈರ್​ಗಳು ನಿರ್ಧರಿಸಿದರು. ಅದರಂತೆ ಅಂತಿಮ ಹಣಾಹಣಿಯು ಮಳೆಗೆ ಅಹುತಿಯಾಯಿತು. ಇದಾಗ್ಯೂ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದ ಟೀಮ್ ಇಂಡಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು.

ಈ ಮೂಲಕ ಏಷ್ಯನ್ ಗೇಮ್ಸ್​ ಕ್ರಿಕೆಟ್​ನಲ್ಲಿ ಭಾರತ ತಂಡವು ಸ್ವರ್ಣ ಪದಕವನ್ನು ಗೆದ್ದುಕೊಂಡಿದೆ. ಇನ್ನು ರನ್ನರ್ ಅಪ್ ತಂಡ ಅಫ್ಘಾನಿಸ್ತಾನ್ ತಂಡವು ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದರೆ, ಬಾಂಗ್ಲಾದೇಶ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

43 mins ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

45 mins ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

48 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

49 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

54 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

59 mins ago