ಕ್ರೀಡೆ

ಏಷ್ಯನ್ ಗೇಮ್ಸ್: ಭಾರತ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ!

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತ ಕ್ರಿಕೆಟ್ ತಂಡ ಚೊಚ್ಚಲ ಚಿನ್ನದ ಪದಕ ಗೆದ್ದಿದೆ. ಅಫ್ಘಾನಿಸ್ಥಾನದ ವಿರುದ್ಧ ಫೈನಲ್ಸ್ ಪಂದ್ಯ ಮಳೆಯ ಕಾರಣ ರದ್ದಾಗಿದ್ದು, ಹೆಚ್ಚಿನ ಶ್ರೇಣಿಯಲ್ಲಿ ಸ್ಥಾನ ಪಡೆದಿದ್ದರಿಂದ ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವನ್ನು ವಿಜೇತ ತಂಡ ಎಂದು ಘೋಷಿಸಲಾಗಿದೆ.

ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 18.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್​ ಕಲೆಹಾಕಿದಾಗ ಮಳೆ ಬರಲಾರಂಭಿಸಿತು.

ಧಾರಾಕಾರ ಸುರಿದ ಮಳೆಯಿಂದ ಮೈದಾನವು ಸಂಪೂರ್ಣ ಒದ್ದೆಯಾಗಿದ್ದು, ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲು ಅಂಪೈರ್​ಗಳು ನಿರ್ಧರಿಸಿದರು. ಅದರಂತೆ ಅಂತಿಮ ಹಣಾಹಣಿಯು ಮಳೆಗೆ ಅಹುತಿಯಾಯಿತು. ಇದಾಗ್ಯೂ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದ ಟೀಮ್ ಇಂಡಿಯಾವನ್ನು ವಿಜಯಿ ಎಂದು ಘೋಷಿಸಲಾಯಿತು.

ಈ ಮೂಲಕ ಏಷ್ಯನ್ ಗೇಮ್ಸ್​ ಕ್ರಿಕೆಟ್​ನಲ್ಲಿ ಭಾರತ ತಂಡವು ಸ್ವರ್ಣ ಪದಕವನ್ನು ಗೆದ್ದುಕೊಂಡಿದೆ. ಇನ್ನು ರನ್ನರ್ ಅಪ್ ತಂಡ ಅಫ್ಘಾನಿಸ್ತಾನ್ ತಂಡವು ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದರೆ, ಬಾಂಗ್ಲಾದೇಶ್ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

andolanait

Recent Posts

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

29 mins ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

49 mins ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

4 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

5 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

5 hours ago