ಕ್ರೀಡೆ

ಏಷ್ಯನ್ ಗೇಮ್ಸ್‌: ಆರ್ಚರಿಯಲ್ಲಿ ಜ್ಯೋತಿ ಸುರೇಶ್, ಓಜಸ್‌ಗೆ ಚಿನ್ನ

ಹಾಂಗ್‌ಝೌ : ಚೀನಾದ ಹಾಂಗ್‌ಚೌದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಆರ್ಚರಿಯಲ್ಲಿ ಭಾರತದ ಜ್ಯೋತಿ ಸುರೇಶ್ ವೆನ್ನಾಮ್ ಅವರು ಚಿನ್ನದ ಪದಕ ಗೆದ್ದಿದ್ದಾರೆ.

ಅರ್ಚರಿ ಮಹಿಳೆಯರ ವೈಯಕ್ತಿಕ ಶಾಂಪೌಂಡ್ ವಿಭಾಗದಲ್ಲಿ ದಕ್ಷಿಣ ಕೊರಿಯಾದ ಕ್ರೀಡಾಳುವನ್ನು ಮಣಿಸಿದ ಜ್ಯೋತಿ ಅವರಿಗೆ ಚಿನ್ನದ ಪದಕ ಲಭಿಸಿತು.

ಈಗಾಗಲೇ ಏಷ್ಯನ್ ಕ್ರೀಡಾಕೂಟದ ಆರ್ಚರಿ ಇತರೆ ವಿಭಾಗಗಳಲ್ಲಿ ಜ್ಯೋತಿ ಅವರಿಗೆ ಎರಡು ಚಿನ್ನದ ಪದಕಗಳು ಲಭಿಸಿವೆ. ಇದರೊಂದಿಗೆ ಅವರು ಮೂರು ಚಿನ್ನದ ಪದಕಗಳನ್ನು ತಮ್ಮ ಮುಡಿಗೇರಿಸಿಕೊಂಡರು.

ಇನ್ನು ಅರ್ಚರಿ ಪುರುಷರ ವೈಯಕ್ತಿಕ ಕಾಂಪೌಂಡ್ ವಿಭಾಗದಲ್ಲಿ 21 ವರ್ಷದ ಓಜಸ್ ದೇವತಾಳ ಅವರು ಐತಿಹಾಸಿಕವಾಗಿ ಚಿನ್ನದ ಪದಕ ಗೆದ್ದಿದ್ದಾರೆ.

ಇದರೊಂದಿಗೆ ಭಾರತ ಈ ಸಾರಿಯ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ 100 ಪದಕಗಳನ್ನು ಗೆದ್ದಂತಾಗಿದೆ. 25 ಚಿನ್ನ, 35 ಬೆಳ್ಳಿ ಹಾಗೂ 40 ಕಂಚಿನ ಪದಕಗಳು ಭಾರತಕ್ಕೆ ಸಿಕ್ಕಿವೆ.

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈ ಸಾರಿ ಅತಿಹೆಚ್ಚು ಪದಕಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಭಾರತ ಮಹಿಳಾ ಕಬಡ್ಡಿ ತಂಡ ಗೆದ್ದ ಚಿನ್ನದ ಪದಕ 100ನೇಯದ್ದು.

andolanait

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

8 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

8 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

9 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

10 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

10 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

18 hours ago