ಹಾಂಗ್ಝೌ : ಚೀನಾದ ಹಾಂಗ್ಚೌದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಆರ್ಚರಿಯಲ್ಲಿ ಭಾರತದ ಜ್ಯೋತಿ ಸುರೇಶ್ ವೆನ್ನಾಮ್ ಅವರು ಚಿನ್ನದ ಪದಕ ಗೆದ್ದಿದ್ದಾರೆ.
ಅರ್ಚರಿ ಮಹಿಳೆಯರ ವೈಯಕ್ತಿಕ ಶಾಂಪೌಂಡ್ ವಿಭಾಗದಲ್ಲಿ ದಕ್ಷಿಣ ಕೊರಿಯಾದ ಕ್ರೀಡಾಳುವನ್ನು ಮಣಿಸಿದ ಜ್ಯೋತಿ ಅವರಿಗೆ ಚಿನ್ನದ ಪದಕ ಲಭಿಸಿತು.
ಈಗಾಗಲೇ ಏಷ್ಯನ್ ಕ್ರೀಡಾಕೂಟದ ಆರ್ಚರಿ ಇತರೆ ವಿಭಾಗಗಳಲ್ಲಿ ಜ್ಯೋತಿ ಅವರಿಗೆ ಎರಡು ಚಿನ್ನದ ಪದಕಗಳು ಲಭಿಸಿವೆ. ಇದರೊಂದಿಗೆ ಅವರು ಮೂರು ಚಿನ್ನದ ಪದಕಗಳನ್ನು ತಮ್ಮ ಮುಡಿಗೇರಿಸಿಕೊಂಡರು.
ಇನ್ನು ಅರ್ಚರಿ ಪುರುಷರ ವೈಯಕ್ತಿಕ ಕಾಂಪೌಂಡ್ ವಿಭಾಗದಲ್ಲಿ 21 ವರ್ಷದ ಓಜಸ್ ದೇವತಾಳ ಅವರು ಐತಿಹಾಸಿಕವಾಗಿ ಚಿನ್ನದ ಪದಕ ಗೆದ್ದಿದ್ದಾರೆ.
ಇದರೊಂದಿಗೆ ಭಾರತ ಈ ಸಾರಿಯ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ 100 ಪದಕಗಳನ್ನು ಗೆದ್ದಂತಾಗಿದೆ. 25 ಚಿನ್ನ, 35 ಬೆಳ್ಳಿ ಹಾಗೂ 40 ಕಂಚಿನ ಪದಕಗಳು ಭಾರತಕ್ಕೆ ಸಿಕ್ಕಿವೆ.
ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈ ಸಾರಿ ಅತಿಹೆಚ್ಚು ಪದಕಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಭಾರತ ಮಹಿಳಾ ಕಬಡ್ಡಿ ತಂಡ ಗೆದ್ದ ಚಿನ್ನದ ಪದಕ 100ನೇಯದ್ದು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…