ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು.
ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕಬಡ್ಡಿ ತಂಡವು ಚೈನೀಸ್ ತೈಪೆ ವಿರುದ್ಧ 14-9 ಅಂತರದಲ್ಲಿ ಮುನ್ನಡೆ ಸಾಧಿಸಿ ಚಿನ್ನದ ಪದಕ ಗಳಿಸಿತು. ಆರಂಭಿಕ ಪಂದ್ಯದಲ್ಲಿ ಉಭಯ ತಂಡಗಳು 34-34 ರಿಂದ ಟೈ ಆಗಿದ್ದವು. ಮೊದಲಾರ್ಧದಲ್ಲಿ ಭಾರತದ ರೈಡರ್ಸ್ ಆರು ಬೋನಸ್ ಅಂಕಗಳನ್ನು ಗಳಿಸಿದರು.
ದ್ವಿತೀಯಾರ್ಧದಲ್ಲಿ ಚೈನೀಸ್ ತೈಪೆ ಮುನ್ನಡೆ ಸಾಧಿಸಿ 16 ಅಂಕ ಗಳಿಸಿದರೆ, ಭಾರತೀಯರು ಕೇವಲ 12 ಅಂಕ ಗಳಿಸಲಷ್ಟೇ ಶಕ್ತರಾದರು. ಆದರೆ, ಭಾರತದ ರೈಡರ್ಸ್ ಎರಡು ಬೋನಸ್ ಅಂಕಗಳನ್ನು ಗಳಿಸಿದರು. ಅಂತಿಮವಾಗಿ ಮೊದಲಾರ್ಧದಲ್ಲಿನ ತಮ್ಮ ಅಮೋಘ ಪ್ರದರ್ಶನದಿಂದಾಗಿ, ಶನಿವಾರ ನಡೆದ ಪಂದ್ಯದಲ್ಲಿ ಭಾರತದ ಕಬಡ್ಡಿ ಆಟಗಾರರು ಚೈನೀಸ್ ತೈಪೆ ವಿರುದ್ಧ 26-25 ಅಂತರದಿಂದ ಜಯಗಳಿಸಿ ಚಿನ್ನದ ಪದಕ ಪಡೆದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರತೀಯ ಕ್ರೀಡಾ ಪ್ರಾಧಿಕಾರ, “ಸಂಪೂರ್ಣ ಪ್ರಾಬಲ್ಯ! ನಮ್ಮ ಮಹಿಳಾ ಕಬಡ್ಡಿ ತಂಡವು ವಿಜಯಶಾಲಿಯಾಗಿ ಹೊರಹೊಮ್ಮಿದೆ, ಚೈನೀಸ್ ತೈಪೆ ತಂಡವನ್ನು ಸೋಲಿಸಿ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಮಹಿಳಾ ತಂಡದ ಅಪ್ರತಿಮ ಕೌಶಲ್ಯ, ದೃಢತೆ ಮತ್ತು ಟೀಮ್ ವರ್ಕ್ ರಾಷ್ಟ್ರಕ್ಕೆ ಕೀರ್ತಿ ತಂದಿದೆ. ಮತ್ತು ಭಾರತವು ಇದುವರೆಗೆ 100 ಪದಕಗಳು ಜಯಸಿದೆ ಎಂದು ಹೇಳಿದೆ.
ಪ್ರಧಾನಿ ಮೋದಿ ಅಭಿನಂದನೆ: ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಐತಿಹಾಸಿಕ ಕ್ಷಣವಾಗಿದೆ. ನಮ್ಮ ಕಬಡ್ಡಿ ಮಹಿಳಾ ತಂಡ ಚಿನ್ನಕ್ಕೆ ಕೊರಳೊಡ್ಡಿದೆ! ಈ ಗೆಲುವು ನಮ್ಮ ಮಹಿಳಾ ಕ್ರೀಡಾಪಟುಗಳ ಅದಮ್ಯ ಮನೋಭಾವಕ್ಕೆ ಸಾಕ್ಷಿಯಾಗಿದೆ. ಈ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ಇದೆ. ತಂಡಕ್ಕೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…