ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು.
ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕಬಡ್ಡಿ ತಂಡವು ಚೈನೀಸ್ ತೈಪೆ ವಿರುದ್ಧ 14-9 ಅಂತರದಲ್ಲಿ ಮುನ್ನಡೆ ಸಾಧಿಸಿ ಚಿನ್ನದ ಪದಕ ಗಳಿಸಿತು. ಆರಂಭಿಕ ಪಂದ್ಯದಲ್ಲಿ ಉಭಯ ತಂಡಗಳು 34-34 ರಿಂದ ಟೈ ಆಗಿದ್ದವು. ಮೊದಲಾರ್ಧದಲ್ಲಿ ಭಾರತದ ರೈಡರ್ಸ್ ಆರು ಬೋನಸ್ ಅಂಕಗಳನ್ನು ಗಳಿಸಿದರು.
ದ್ವಿತೀಯಾರ್ಧದಲ್ಲಿ ಚೈನೀಸ್ ತೈಪೆ ಮುನ್ನಡೆ ಸಾಧಿಸಿ 16 ಅಂಕ ಗಳಿಸಿದರೆ, ಭಾರತೀಯರು ಕೇವಲ 12 ಅಂಕ ಗಳಿಸಲಷ್ಟೇ ಶಕ್ತರಾದರು. ಆದರೆ, ಭಾರತದ ರೈಡರ್ಸ್ ಎರಡು ಬೋನಸ್ ಅಂಕಗಳನ್ನು ಗಳಿಸಿದರು. ಅಂತಿಮವಾಗಿ ಮೊದಲಾರ್ಧದಲ್ಲಿನ ತಮ್ಮ ಅಮೋಘ ಪ್ರದರ್ಶನದಿಂದಾಗಿ, ಶನಿವಾರ ನಡೆದ ಪಂದ್ಯದಲ್ಲಿ ಭಾರತದ ಕಬಡ್ಡಿ ಆಟಗಾರರು ಚೈನೀಸ್ ತೈಪೆ ವಿರುದ್ಧ 26-25 ಅಂತರದಿಂದ ಜಯಗಳಿಸಿ ಚಿನ್ನದ ಪದಕ ಪಡೆದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರತೀಯ ಕ್ರೀಡಾ ಪ್ರಾಧಿಕಾರ, “ಸಂಪೂರ್ಣ ಪ್ರಾಬಲ್ಯ! ನಮ್ಮ ಮಹಿಳಾ ಕಬಡ್ಡಿ ತಂಡವು ವಿಜಯಶಾಲಿಯಾಗಿ ಹೊರಹೊಮ್ಮಿದೆ, ಚೈನೀಸ್ ತೈಪೆ ತಂಡವನ್ನು ಸೋಲಿಸಿ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಮಹಿಳಾ ತಂಡದ ಅಪ್ರತಿಮ ಕೌಶಲ್ಯ, ದೃಢತೆ ಮತ್ತು ಟೀಮ್ ವರ್ಕ್ ರಾಷ್ಟ್ರಕ್ಕೆ ಕೀರ್ತಿ ತಂದಿದೆ. ಮತ್ತು ಭಾರತವು ಇದುವರೆಗೆ 100 ಪದಕಗಳು ಜಯಸಿದೆ ಎಂದು ಹೇಳಿದೆ.
ಪ್ರಧಾನಿ ಮೋದಿ ಅಭಿನಂದನೆ: ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಐತಿಹಾಸಿಕ ಕ್ಷಣವಾಗಿದೆ. ನಮ್ಮ ಕಬಡ್ಡಿ ಮಹಿಳಾ ತಂಡ ಚಿನ್ನಕ್ಕೆ ಕೊರಳೊಡ್ಡಿದೆ! ಈ ಗೆಲುವು ನಮ್ಮ ಮಹಿಳಾ ಕ್ರೀಡಾಪಟುಗಳ ಅದಮ್ಯ ಮನೋಭಾವಕ್ಕೆ ಸಾಕ್ಷಿಯಾಗಿದೆ. ಈ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ಇದೆ. ತಂಡಕ್ಕೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…
ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…
೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…
ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…