ಕ್ರೀಡೆ

ಏಷ್ಯನ್ ಗೇಮ್ಸ್: ಮಹಿಳೆಯರ ಕಬಡ್ಡಿಯಲ್ಲಿ ಚಿನ್ನ-ಭಾರತ 100 ಪದಕಗಳ ಸಾಧನೆ!

ಹ್ಯಾಂಗ್‌ಝೌ: ಚೀನಾದ  ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು.

ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕಬಡ್ಡಿ ತಂಡವು ಚೈನೀಸ್ ತೈಪೆ ವಿರುದ್ಧ 14-9 ಅಂತರದಲ್ಲಿ ಮುನ್ನಡೆ ಸಾಧಿಸಿ ಚಿನ್ನದ ಪದಕ ಗಳಿಸಿತು. ಆರಂಭಿಕ ಪಂದ್ಯದಲ್ಲಿ ಉಭಯ ತಂಡಗಳು 34-34 ರಿಂದ ಟೈ ಆಗಿದ್ದವು. ಮೊದಲಾರ್ಧದಲ್ಲಿ ಭಾರತದ ರೈಡರ್ಸ್ ಆರು ಬೋನಸ್ ಅಂಕಗಳನ್ನು ಗಳಿಸಿದರು.

ದ್ವಿತೀಯಾರ್ಧದಲ್ಲಿ ಚೈನೀಸ್ ತೈಪೆ ಮುನ್ನಡೆ ಸಾಧಿಸಿ 16 ಅಂಕ ಗಳಿಸಿದರೆ, ಭಾರತೀಯರು ಕೇವಲ 12 ಅಂಕ ಗಳಿಸಲಷ್ಟೇ ಶಕ್ತರಾದರು. ಆದರೆ, ಭಾರತದ ರೈಡರ್ಸ್ ಎರಡು ಬೋನಸ್ ಅಂಕಗಳನ್ನು ಗಳಿಸಿದರು. ಅಂತಿಮವಾಗಿ ಮೊದಲಾರ್ಧದಲ್ಲಿನ ತಮ್ಮ ಅಮೋಘ ಪ್ರದರ್ಶನದಿಂದಾಗಿ, ಶನಿವಾರ ನಡೆದ ಪಂದ್ಯದಲ್ಲಿ ಭಾರತದ ಕಬಡ್ಡಿ ಆಟಗಾರರು ಚೈನೀಸ್ ತೈಪೆ ವಿರುದ್ಧ 26-25 ಅಂತರದಿಂದ ಜಯಗಳಿಸಿ ಚಿನ್ನದ ಪದಕ ಪಡೆದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರತೀಯ ಕ್ರೀಡಾ ಪ್ರಾಧಿಕಾರ, “ಸಂಪೂರ್ಣ ಪ್ರಾಬಲ್ಯ! ನಮ್ಮ ಮಹಿಳಾ ಕಬಡ್ಡಿ ತಂಡವು ವಿಜಯಶಾಲಿಯಾಗಿ ಹೊರಹೊಮ್ಮಿದೆ, ಚೈನೀಸ್ ತೈಪೆ ತಂಡವನ್ನು ಸೋಲಿಸಿ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಮಹಿಳಾ ತಂಡದ ಅಪ್ರತಿಮ ಕೌಶಲ್ಯ, ದೃಢತೆ ಮತ್ತು ಟೀಮ್ ವರ್ಕ್ ರಾಷ್ಟ್ರಕ್ಕೆ ಕೀರ್ತಿ ತಂದಿದೆ. ಮತ್ತು ಭಾರತವು ಇದುವರೆಗೆ 100 ಪದಕಗಳು ಜಯಸಿದೆ ಎಂದು ಹೇಳಿದೆ.

ಪ್ರಧಾನಿ ಮೋದಿ ಅಭಿನಂದನೆ:  ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಐತಿಹಾಸಿಕ ಕ್ಷಣವಾಗಿದೆ. ನಮ್ಮ ಕಬಡ್ಡಿ ಮಹಿಳಾ ತಂಡ ಚಿನ್ನಕ್ಕೆ ಕೊರಳೊಡ್ಡಿದೆ! ಈ ಗೆಲುವು ನಮ್ಮ ಮಹಿಳಾ ಕ್ರೀಡಾಪಟುಗಳ ಅದಮ್ಯ ಮನೋಭಾವಕ್ಕೆ ಸಾಕ್ಷಿಯಾಗಿದೆ. ಈ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ಇದೆ. ತಂಡಕ್ಕೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

7 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

8 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

9 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

9 hours ago