ಕ್ರೀಡೆ

ಏಷ್ಯನ್ ಗೇಮ್ಸ್: ಮಹಿಳೆಯರ ಕಬಡ್ಡಿಯಲ್ಲಿ ಚಿನ್ನ-ಭಾರತ 100 ಪದಕಗಳ ಸಾಧನೆ!

ಹ್ಯಾಂಗ್‌ಝೌ: ಚೀನಾದ  ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು.

ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕಬಡ್ಡಿ ತಂಡವು ಚೈನೀಸ್ ತೈಪೆ ವಿರುದ್ಧ 14-9 ಅಂತರದಲ್ಲಿ ಮುನ್ನಡೆ ಸಾಧಿಸಿ ಚಿನ್ನದ ಪದಕ ಗಳಿಸಿತು. ಆರಂಭಿಕ ಪಂದ್ಯದಲ್ಲಿ ಉಭಯ ತಂಡಗಳು 34-34 ರಿಂದ ಟೈ ಆಗಿದ್ದವು. ಮೊದಲಾರ್ಧದಲ್ಲಿ ಭಾರತದ ರೈಡರ್ಸ್ ಆರು ಬೋನಸ್ ಅಂಕಗಳನ್ನು ಗಳಿಸಿದರು.

ದ್ವಿತೀಯಾರ್ಧದಲ್ಲಿ ಚೈನೀಸ್ ತೈಪೆ ಮುನ್ನಡೆ ಸಾಧಿಸಿ 16 ಅಂಕ ಗಳಿಸಿದರೆ, ಭಾರತೀಯರು ಕೇವಲ 12 ಅಂಕ ಗಳಿಸಲಷ್ಟೇ ಶಕ್ತರಾದರು. ಆದರೆ, ಭಾರತದ ರೈಡರ್ಸ್ ಎರಡು ಬೋನಸ್ ಅಂಕಗಳನ್ನು ಗಳಿಸಿದರು. ಅಂತಿಮವಾಗಿ ಮೊದಲಾರ್ಧದಲ್ಲಿನ ತಮ್ಮ ಅಮೋಘ ಪ್ರದರ್ಶನದಿಂದಾಗಿ, ಶನಿವಾರ ನಡೆದ ಪಂದ್ಯದಲ್ಲಿ ಭಾರತದ ಕಬಡ್ಡಿ ಆಟಗಾರರು ಚೈನೀಸ್ ತೈಪೆ ವಿರುದ್ಧ 26-25 ಅಂತರದಿಂದ ಜಯಗಳಿಸಿ ಚಿನ್ನದ ಪದಕ ಪಡೆದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರತೀಯ ಕ್ರೀಡಾ ಪ್ರಾಧಿಕಾರ, “ಸಂಪೂರ್ಣ ಪ್ರಾಬಲ್ಯ! ನಮ್ಮ ಮಹಿಳಾ ಕಬಡ್ಡಿ ತಂಡವು ವಿಜಯಶಾಲಿಯಾಗಿ ಹೊರಹೊಮ್ಮಿದೆ, ಚೈನೀಸ್ ತೈಪೆ ತಂಡವನ್ನು ಸೋಲಿಸಿ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಮಹಿಳಾ ತಂಡದ ಅಪ್ರತಿಮ ಕೌಶಲ್ಯ, ದೃಢತೆ ಮತ್ತು ಟೀಮ್ ವರ್ಕ್ ರಾಷ್ಟ್ರಕ್ಕೆ ಕೀರ್ತಿ ತಂದಿದೆ. ಮತ್ತು ಭಾರತವು ಇದುವರೆಗೆ 100 ಪದಕಗಳು ಜಯಸಿದೆ ಎಂದು ಹೇಳಿದೆ.

ಪ್ರಧಾನಿ ಮೋದಿ ಅಭಿನಂದನೆ:  ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಐತಿಹಾಸಿಕ ಕ್ಷಣವಾಗಿದೆ. ನಮ್ಮ ಕಬಡ್ಡಿ ಮಹಿಳಾ ತಂಡ ಚಿನ್ನಕ್ಕೆ ಕೊರಳೊಡ್ಡಿದೆ! ಈ ಗೆಲುವು ನಮ್ಮ ಮಹಿಳಾ ಕ್ರೀಡಾಪಟುಗಳ ಅದಮ್ಯ ಮನೋಭಾವಕ್ಕೆ ಸಾಕ್ಷಿಯಾಗಿದೆ. ಈ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ಇದೆ. ತಂಡಕ್ಕೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ

andolanait

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

5 mins ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

1 hour ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

3 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

3 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

8 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

9 hours ago