ಕ್ರೀಡೆ

ಏಷ್ಯನ್ ಗೇಮ್ಸ್: ಮಹಿಳೆಯರ ಕಬಡ್ಡಿಯಲ್ಲಿ ಚಿನ್ನ-ಭಾರತ 100 ಪದಕಗಳ ಸಾಧನೆ!

ಹ್ಯಾಂಗ್‌ಝೌ: ಚೀನಾದ  ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್‌ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ಬಹು-ಕ್ರೀಡಾ ಸ್ಪರ್ಧೆಯಲ್ಲಿ 100 ಪದಕಗಳ ಗಡಿಯನ್ನು ತಲುಪಿತು.

ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕಬಡ್ಡಿ ತಂಡವು ಚೈನೀಸ್ ತೈಪೆ ವಿರುದ್ಧ 14-9 ಅಂತರದಲ್ಲಿ ಮುನ್ನಡೆ ಸಾಧಿಸಿ ಚಿನ್ನದ ಪದಕ ಗಳಿಸಿತು. ಆರಂಭಿಕ ಪಂದ್ಯದಲ್ಲಿ ಉಭಯ ತಂಡಗಳು 34-34 ರಿಂದ ಟೈ ಆಗಿದ್ದವು. ಮೊದಲಾರ್ಧದಲ್ಲಿ ಭಾರತದ ರೈಡರ್ಸ್ ಆರು ಬೋನಸ್ ಅಂಕಗಳನ್ನು ಗಳಿಸಿದರು.

ದ್ವಿತೀಯಾರ್ಧದಲ್ಲಿ ಚೈನೀಸ್ ತೈಪೆ ಮುನ್ನಡೆ ಸಾಧಿಸಿ 16 ಅಂಕ ಗಳಿಸಿದರೆ, ಭಾರತೀಯರು ಕೇವಲ 12 ಅಂಕ ಗಳಿಸಲಷ್ಟೇ ಶಕ್ತರಾದರು. ಆದರೆ, ಭಾರತದ ರೈಡರ್ಸ್ ಎರಡು ಬೋನಸ್ ಅಂಕಗಳನ್ನು ಗಳಿಸಿದರು. ಅಂತಿಮವಾಗಿ ಮೊದಲಾರ್ಧದಲ್ಲಿನ ತಮ್ಮ ಅಮೋಘ ಪ್ರದರ್ಶನದಿಂದಾಗಿ, ಶನಿವಾರ ನಡೆದ ಪಂದ್ಯದಲ್ಲಿ ಭಾರತದ ಕಬಡ್ಡಿ ಆಟಗಾರರು ಚೈನೀಸ್ ತೈಪೆ ವಿರುದ್ಧ 26-25 ಅಂತರದಿಂದ ಜಯಗಳಿಸಿ ಚಿನ್ನದ ಪದಕ ಪಡೆದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಭಾರತೀಯ ಕ್ರೀಡಾ ಪ್ರಾಧಿಕಾರ, “ಸಂಪೂರ್ಣ ಪ್ರಾಬಲ್ಯ! ನಮ್ಮ ಮಹಿಳಾ ಕಬಡ್ಡಿ ತಂಡವು ವಿಜಯಶಾಲಿಯಾಗಿ ಹೊರಹೊಮ್ಮಿದೆ, ಚೈನೀಸ್ ತೈಪೆ ತಂಡವನ್ನು ಸೋಲಿಸಿ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಮಹಿಳಾ ತಂಡದ ಅಪ್ರತಿಮ ಕೌಶಲ್ಯ, ದೃಢತೆ ಮತ್ತು ಟೀಮ್ ವರ್ಕ್ ರಾಷ್ಟ್ರಕ್ಕೆ ಕೀರ್ತಿ ತಂದಿದೆ. ಮತ್ತು ಭಾರತವು ಇದುವರೆಗೆ 100 ಪದಕಗಳು ಜಯಸಿದೆ ಎಂದು ಹೇಳಿದೆ.

ಪ್ರಧಾನಿ ಮೋದಿ ಅಭಿನಂದನೆ:  ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಐತಿಹಾಸಿಕ ಕ್ಷಣವಾಗಿದೆ. ನಮ್ಮ ಕಬಡ್ಡಿ ಮಹಿಳಾ ತಂಡ ಚಿನ್ನಕ್ಕೆ ಕೊರಳೊಡ್ಡಿದೆ! ಈ ಗೆಲುವು ನಮ್ಮ ಮಹಿಳಾ ಕ್ರೀಡಾಪಟುಗಳ ಅದಮ್ಯ ಮನೋಭಾವಕ್ಕೆ ಸಾಕ್ಷಿಯಾಗಿದೆ. ಈ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ಇದೆ. ತಂಡಕ್ಕೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago