ಕ್ರೀಡೆ

ಏಷ್ಯನ್ ಗೇಮ್ಸ್ : ಆರ್ಚರಿಯಲ್ಲಿ ಭಾರತಕ್ಕೆ ಚಿನ್ನದ ಪದಕ

ಹಾಂಗ್‌ಝ್ : ಭಾರತದ ಜ್ಯೋತಿ ಸುರೇಖಾ ಹಾಗೂ ಓಜಸ್ ದೇವತಾಳೆ ಅವರು ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯ ಮಿಶ್ರ ಕಾಂಪೌಂಡ್ ವಿಭಾಗದಲ್ಲಿ ಬುಧವಾರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಈ ಜೋಡಿ, ದಕ್ಷಿಣ ಕೊರಿಯಾ ಸೊ ಚಾಯಿವೊನ್ ಮತ್ತು ಜೂ ಜಾಯಿಹೂನ್ ಎದುರು ವಿರುದ್ಧ 159-158 ಅಂತರದಲ್ಲಿ ಗೆಲುವು ಸಾಧಿಸಿತು.

ಉಭಯ ತಂಡಗಳು ಮೊದಲ ಮೂರು ಸುತ್ತುಗಳಲ್ಲಿ ಕ್ರಮವಾಗಿ 40-39, 40-40 ಮತ್ತು 39-40 ಪಾಯಿಂಟ್ ಗಳಿಸಿದವು. ಹೀಗಾಗಿ ಮೂರನೇ ಸುತ್ತಿನ ಅಂತ್ಯಕ್ಕೆ ಸಮಬಲದ (119-119) ಪೈಪೋಟಿ ನಡೆಸಿದವು. ಅಂತಿಮ ಸುತ್ತಿನಲ್ಲಿ ಭಾರತ 40 ಪಾಯಿಂಟ್ ಗಳಿಸಿದರೆ, ಕೊರಿಯಾ 39 ಪಾಯಿಂಟ್ ಕೆಲಹಾಕಿತು. ಹೀಗಾಗಿ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿತು. ಇದು ಜ್ಯೋತಿ ಹಾಗೂ ಓಜಸ್ ಏಷ್ಯನ್ ಗೇಮ್ಸ್‌ನಲ್ಲಿ ಗಳಿಸಿದ ಮೊದಲ ಚಿನ್ನದ ಪದಕವಾಗಿದೆ. ಈ ಇಬ್ಬರು ವೈಯಕ್ತಿಕ ವಿಭಾಗಗಳಲ್ಲಿಯೂ ಫೈನಲ್ ಪ್ರವೇಶಿಸಿದ್ದಾರೆ.

ಈ ಬಾರಿಯ ಕ್ರೀಡಾಕೂಟದಲ್ಲಿ ಇದು ಭಾರತದಲ್ಲಿ ಭಾರತ ಗೆದ್ದ 16ನೇ ಚಿನ್ನದ ಪದಕ ಇದಾಗಿದೆ. ಇದರೊಂದಿಗೆ ಭಾರತ 25 ಬೆಳ್ಳಿ ಹಾಗೂ 29 ಕಂಚಿನ ಪದಕಗಳನ್ನೂ ಜಯಿಸಿದೆ. ಹೀಗಾಗಿ ಈ ಬಾರಿ ಗೆದ್ದ ಒಟ್ಟಾರೆ ಪದಕಗಳ ಸಂಖ್ಯೆಯನ್ನು 71ಕ್ಕೆ ಹೆಚ್ಚಿಸಿಕೊಂಡಿದೆ.2018ರಲ್ಲಿ ಇಂಡೊನೇಷ್ಯಾದಲ್ಲಿ ನಡೆದಿದ್ದ ಕೂಟದಲ್ಲಿ 70 ಪದಕ ಗಳಿಸಿದ್ದು ಶ್ರೇಷ್ಠ ಸಾಧನೆಯಾಗಿತ್ತು.

lokesh

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

11 mins ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

5 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

5 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

5 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

5 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

6 hours ago