ಹಾಂಗ್ಝ್ : ಭಾರತದ ಜ್ಯೋತಿ ಸುರೇಖಾ ಹಾಗೂ ಓಜಸ್ ದೇವತಾಳೆ ಅವರು ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯ ಮಿಶ್ರ ಕಾಂಪೌಂಡ್ ವಿಭಾಗದಲ್ಲಿ ಬುಧವಾರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಈ ಜೋಡಿ, ದಕ್ಷಿಣ ಕೊರಿಯಾ ಸೊ ಚಾಯಿವೊನ್ ಮತ್ತು ಜೂ ಜಾಯಿಹೂನ್ ಎದುರು ವಿರುದ್ಧ 159-158 ಅಂತರದಲ್ಲಿ ಗೆಲುವು ಸಾಧಿಸಿತು.
ಉಭಯ ತಂಡಗಳು ಮೊದಲ ಮೂರು ಸುತ್ತುಗಳಲ್ಲಿ ಕ್ರಮವಾಗಿ 40-39, 40-40 ಮತ್ತು 39-40 ಪಾಯಿಂಟ್ ಗಳಿಸಿದವು. ಹೀಗಾಗಿ ಮೂರನೇ ಸುತ್ತಿನ ಅಂತ್ಯಕ್ಕೆ ಸಮಬಲದ (119-119) ಪೈಪೋಟಿ ನಡೆಸಿದವು. ಅಂತಿಮ ಸುತ್ತಿನಲ್ಲಿ ಭಾರತ 40 ಪಾಯಿಂಟ್ ಗಳಿಸಿದರೆ, ಕೊರಿಯಾ 39 ಪಾಯಿಂಟ್ ಕೆಲಹಾಕಿತು. ಹೀಗಾಗಿ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿತು. ಇದು ಜ್ಯೋತಿ ಹಾಗೂ ಓಜಸ್ ಏಷ್ಯನ್ ಗೇಮ್ಸ್ನಲ್ಲಿ ಗಳಿಸಿದ ಮೊದಲ ಚಿನ್ನದ ಪದಕವಾಗಿದೆ. ಈ ಇಬ್ಬರು ವೈಯಕ್ತಿಕ ವಿಭಾಗಗಳಲ್ಲಿಯೂ ಫೈನಲ್ ಪ್ರವೇಶಿಸಿದ್ದಾರೆ.
ಈ ಬಾರಿಯ ಕ್ರೀಡಾಕೂಟದಲ್ಲಿ ಇದು ಭಾರತದಲ್ಲಿ ಭಾರತ ಗೆದ್ದ 16ನೇ ಚಿನ್ನದ ಪದಕ ಇದಾಗಿದೆ. ಇದರೊಂದಿಗೆ ಭಾರತ 25 ಬೆಳ್ಳಿ ಹಾಗೂ 29 ಕಂಚಿನ ಪದಕಗಳನ್ನೂ ಜಯಿಸಿದೆ. ಹೀಗಾಗಿ ಈ ಬಾರಿ ಗೆದ್ದ ಒಟ್ಟಾರೆ ಪದಕಗಳ ಸಂಖ್ಯೆಯನ್ನು 71ಕ್ಕೆ ಹೆಚ್ಚಿಸಿಕೊಂಡಿದೆ.2018ರಲ್ಲಿ ಇಂಡೊನೇಷ್ಯಾದಲ್ಲಿ ನಡೆದಿದ್ದ ಕೂಟದಲ್ಲಿ 70 ಪದಕ ಗಳಿಸಿದ್ದು ಶ್ರೇಷ್ಠ ಸಾಧನೆಯಾಗಿತ್ತು.
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…
ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…
ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…
ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…