ಕ್ರೀಡೆ

ಏಷ್ಯನ್ ಗೇಮ್ಸ್ : ಆರ್ಚರಿಯಲ್ಲಿ ಭಾರತಕ್ಕೆ ಚಿನ್ನದ ಪದಕ

ಹಾಂಗ್‌ಝ್ : ಭಾರತದ ಜ್ಯೋತಿ ಸುರೇಖಾ ಹಾಗೂ ಓಜಸ್ ದೇವತಾಳೆ ಅವರು ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯ ಮಿಶ್ರ ಕಾಂಪೌಂಡ್ ವಿಭಾಗದಲ್ಲಿ ಬುಧವಾರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಈ ಜೋಡಿ, ದಕ್ಷಿಣ ಕೊರಿಯಾ ಸೊ ಚಾಯಿವೊನ್ ಮತ್ತು ಜೂ ಜಾಯಿಹೂನ್ ಎದುರು ವಿರುದ್ಧ 159-158 ಅಂತರದಲ್ಲಿ ಗೆಲುವು ಸಾಧಿಸಿತು.

ಉಭಯ ತಂಡಗಳು ಮೊದಲ ಮೂರು ಸುತ್ತುಗಳಲ್ಲಿ ಕ್ರಮವಾಗಿ 40-39, 40-40 ಮತ್ತು 39-40 ಪಾಯಿಂಟ್ ಗಳಿಸಿದವು. ಹೀಗಾಗಿ ಮೂರನೇ ಸುತ್ತಿನ ಅಂತ್ಯಕ್ಕೆ ಸಮಬಲದ (119-119) ಪೈಪೋಟಿ ನಡೆಸಿದವು. ಅಂತಿಮ ಸುತ್ತಿನಲ್ಲಿ ಭಾರತ 40 ಪಾಯಿಂಟ್ ಗಳಿಸಿದರೆ, ಕೊರಿಯಾ 39 ಪಾಯಿಂಟ್ ಕೆಲಹಾಕಿತು. ಹೀಗಾಗಿ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿತು. ಇದು ಜ್ಯೋತಿ ಹಾಗೂ ಓಜಸ್ ಏಷ್ಯನ್ ಗೇಮ್ಸ್‌ನಲ್ಲಿ ಗಳಿಸಿದ ಮೊದಲ ಚಿನ್ನದ ಪದಕವಾಗಿದೆ. ಈ ಇಬ್ಬರು ವೈಯಕ್ತಿಕ ವಿಭಾಗಗಳಲ್ಲಿಯೂ ಫೈನಲ್ ಪ್ರವೇಶಿಸಿದ್ದಾರೆ.

ಈ ಬಾರಿಯ ಕ್ರೀಡಾಕೂಟದಲ್ಲಿ ಇದು ಭಾರತದಲ್ಲಿ ಭಾರತ ಗೆದ್ದ 16ನೇ ಚಿನ್ನದ ಪದಕ ಇದಾಗಿದೆ. ಇದರೊಂದಿಗೆ ಭಾರತ 25 ಬೆಳ್ಳಿ ಹಾಗೂ 29 ಕಂಚಿನ ಪದಕಗಳನ್ನೂ ಜಯಿಸಿದೆ. ಹೀಗಾಗಿ ಈ ಬಾರಿ ಗೆದ್ದ ಒಟ್ಟಾರೆ ಪದಕಗಳ ಸಂಖ್ಯೆಯನ್ನು 71ಕ್ಕೆ ಹೆಚ್ಚಿಸಿಕೊಂಡಿದೆ.2018ರಲ್ಲಿ ಇಂಡೊನೇಷ್ಯಾದಲ್ಲಿ ನಡೆದಿದ್ದ ಕೂಟದಲ್ಲಿ 70 ಪದಕ ಗಳಿಸಿದ್ದು ಶ್ರೇಷ್ಠ ಸಾಧನೆಯಾಗಿತ್ತು.

lokesh

Recent Posts

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

20 mins ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

1 hour ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

6 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

6 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

6 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

7 hours ago