ಹಾಂಗ್ಝ್ : ಭಾರತದ ಜ್ಯೋತಿ ಸುರೇಖಾ ಹಾಗೂ ಓಜಸ್ ದೇವತಾಳೆ ಅವರು ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯ ಮಿಶ್ರ ಕಾಂಪೌಂಡ್ ವಿಭಾಗದಲ್ಲಿ ಬುಧವಾರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಈ ಜೋಡಿ, ದಕ್ಷಿಣ ಕೊರಿಯಾ ಸೊ ಚಾಯಿವೊನ್ ಮತ್ತು ಜೂ ಜಾಯಿಹೂನ್ ಎದುರು ವಿರುದ್ಧ 159-158 ಅಂತರದಲ್ಲಿ ಗೆಲುವು ಸಾಧಿಸಿತು.
ಉಭಯ ತಂಡಗಳು ಮೊದಲ ಮೂರು ಸುತ್ತುಗಳಲ್ಲಿ ಕ್ರಮವಾಗಿ 40-39, 40-40 ಮತ್ತು 39-40 ಪಾಯಿಂಟ್ ಗಳಿಸಿದವು. ಹೀಗಾಗಿ ಮೂರನೇ ಸುತ್ತಿನ ಅಂತ್ಯಕ್ಕೆ ಸಮಬಲದ (119-119) ಪೈಪೋಟಿ ನಡೆಸಿದವು. ಅಂತಿಮ ಸುತ್ತಿನಲ್ಲಿ ಭಾರತ 40 ಪಾಯಿಂಟ್ ಗಳಿಸಿದರೆ, ಕೊರಿಯಾ 39 ಪಾಯಿಂಟ್ ಕೆಲಹಾಕಿತು. ಹೀಗಾಗಿ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿತು. ಇದು ಜ್ಯೋತಿ ಹಾಗೂ ಓಜಸ್ ಏಷ್ಯನ್ ಗೇಮ್ಸ್ನಲ್ಲಿ ಗಳಿಸಿದ ಮೊದಲ ಚಿನ್ನದ ಪದಕವಾಗಿದೆ. ಈ ಇಬ್ಬರು ವೈಯಕ್ತಿಕ ವಿಭಾಗಗಳಲ್ಲಿಯೂ ಫೈನಲ್ ಪ್ರವೇಶಿಸಿದ್ದಾರೆ.
ಈ ಬಾರಿಯ ಕ್ರೀಡಾಕೂಟದಲ್ಲಿ ಇದು ಭಾರತದಲ್ಲಿ ಭಾರತ ಗೆದ್ದ 16ನೇ ಚಿನ್ನದ ಪದಕ ಇದಾಗಿದೆ. ಇದರೊಂದಿಗೆ ಭಾರತ 25 ಬೆಳ್ಳಿ ಹಾಗೂ 29 ಕಂಚಿನ ಪದಕಗಳನ್ನೂ ಜಯಿಸಿದೆ. ಹೀಗಾಗಿ ಈ ಬಾರಿ ಗೆದ್ದ ಒಟ್ಟಾರೆ ಪದಕಗಳ ಸಂಖ್ಯೆಯನ್ನು 71ಕ್ಕೆ ಹೆಚ್ಚಿಸಿಕೊಂಡಿದೆ.2018ರಲ್ಲಿ ಇಂಡೊನೇಷ್ಯಾದಲ್ಲಿ ನಡೆದಿದ್ದ ಕೂಟದಲ್ಲಿ 70 ಪದಕ ಗಳಿಸಿದ್ದು ಶ್ರೇಷ್ಠ ಸಾಧನೆಯಾಗಿತ್ತು.
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…