ಕ್ರೀಡೆ

ಏಷ್ಯನ್ ಗೇಮ್ಸ್ : ಆರ್ಚರಿಯಲ್ಲಿ ಭಾರತಕ್ಕೆ ಚಿನ್ನದ ಪದಕ

ಹಾಂಗ್‌ಝ್ : ಭಾರತದ ಜ್ಯೋತಿ ಸುರೇಖಾ ಹಾಗೂ ಓಜಸ್ ದೇವತಾಳೆ ಅವರು ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯ ಮಿಶ್ರ ಕಾಂಪೌಂಡ್ ವಿಭಾಗದಲ್ಲಿ ಬುಧವಾರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಈ ಜೋಡಿ, ದಕ್ಷಿಣ ಕೊರಿಯಾ ಸೊ ಚಾಯಿವೊನ್ ಮತ್ತು ಜೂ ಜಾಯಿಹೂನ್ ಎದುರು ವಿರುದ್ಧ 159-158 ಅಂತರದಲ್ಲಿ ಗೆಲುವು ಸಾಧಿಸಿತು.

ಉಭಯ ತಂಡಗಳು ಮೊದಲ ಮೂರು ಸುತ್ತುಗಳಲ್ಲಿ ಕ್ರಮವಾಗಿ 40-39, 40-40 ಮತ್ತು 39-40 ಪಾಯಿಂಟ್ ಗಳಿಸಿದವು. ಹೀಗಾಗಿ ಮೂರನೇ ಸುತ್ತಿನ ಅಂತ್ಯಕ್ಕೆ ಸಮಬಲದ (119-119) ಪೈಪೋಟಿ ನಡೆಸಿದವು. ಅಂತಿಮ ಸುತ್ತಿನಲ್ಲಿ ಭಾರತ 40 ಪಾಯಿಂಟ್ ಗಳಿಸಿದರೆ, ಕೊರಿಯಾ 39 ಪಾಯಿಂಟ್ ಕೆಲಹಾಕಿತು. ಹೀಗಾಗಿ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿತು. ಇದು ಜ್ಯೋತಿ ಹಾಗೂ ಓಜಸ್ ಏಷ್ಯನ್ ಗೇಮ್ಸ್‌ನಲ್ಲಿ ಗಳಿಸಿದ ಮೊದಲ ಚಿನ್ನದ ಪದಕವಾಗಿದೆ. ಈ ಇಬ್ಬರು ವೈಯಕ್ತಿಕ ವಿಭಾಗಗಳಲ್ಲಿಯೂ ಫೈನಲ್ ಪ್ರವೇಶಿಸಿದ್ದಾರೆ.

ಈ ಬಾರಿಯ ಕ್ರೀಡಾಕೂಟದಲ್ಲಿ ಇದು ಭಾರತದಲ್ಲಿ ಭಾರತ ಗೆದ್ದ 16ನೇ ಚಿನ್ನದ ಪದಕ ಇದಾಗಿದೆ. ಇದರೊಂದಿಗೆ ಭಾರತ 25 ಬೆಳ್ಳಿ ಹಾಗೂ 29 ಕಂಚಿನ ಪದಕಗಳನ್ನೂ ಜಯಿಸಿದೆ. ಹೀಗಾಗಿ ಈ ಬಾರಿ ಗೆದ್ದ ಒಟ್ಟಾರೆ ಪದಕಗಳ ಸಂಖ್ಯೆಯನ್ನು 71ಕ್ಕೆ ಹೆಚ್ಚಿಸಿಕೊಂಡಿದೆ.2018ರಲ್ಲಿ ಇಂಡೊನೇಷ್ಯಾದಲ್ಲಿ ನಡೆದಿದ್ದ ಕೂಟದಲ್ಲಿ 70 ಪದಕ ಗಳಿಸಿದ್ದು ಶ್ರೇಷ್ಠ ಸಾಧನೆಯಾಗಿತ್ತು.

lokesh

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

41 mins ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

4 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

4 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

5 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

5 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

5 hours ago