ಹಾಂಗ್ಝ್ : ಭಾರತದ ಜ್ಯೋತಿ ಸುರೇಖಾ ಹಾಗೂ ಓಜಸ್ ದೇವತಾಳೆ ಅವರು ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯ ಮಿಶ್ರ ಕಾಂಪೌಂಡ್ ವಿಭಾಗದಲ್ಲಿ ಬುಧವಾರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಈ ಜೋಡಿ, ದಕ್ಷಿಣ ಕೊರಿಯಾ ಸೊ ಚಾಯಿವೊನ್ ಮತ್ತು ಜೂ ಜಾಯಿಹೂನ್ ಎದುರು ವಿರುದ್ಧ 159-158 ಅಂತರದಲ್ಲಿ ಗೆಲುವು ಸಾಧಿಸಿತು.
ಉಭಯ ತಂಡಗಳು ಮೊದಲ ಮೂರು ಸುತ್ತುಗಳಲ್ಲಿ ಕ್ರಮವಾಗಿ 40-39, 40-40 ಮತ್ತು 39-40 ಪಾಯಿಂಟ್ ಗಳಿಸಿದವು. ಹೀಗಾಗಿ ಮೂರನೇ ಸುತ್ತಿನ ಅಂತ್ಯಕ್ಕೆ ಸಮಬಲದ (119-119) ಪೈಪೋಟಿ ನಡೆಸಿದವು. ಅಂತಿಮ ಸುತ್ತಿನಲ್ಲಿ ಭಾರತ 40 ಪಾಯಿಂಟ್ ಗಳಿಸಿದರೆ, ಕೊರಿಯಾ 39 ಪಾಯಿಂಟ್ ಕೆಲಹಾಕಿತು. ಹೀಗಾಗಿ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿತು. ಇದು ಜ್ಯೋತಿ ಹಾಗೂ ಓಜಸ್ ಏಷ್ಯನ್ ಗೇಮ್ಸ್ನಲ್ಲಿ ಗಳಿಸಿದ ಮೊದಲ ಚಿನ್ನದ ಪದಕವಾಗಿದೆ. ಈ ಇಬ್ಬರು ವೈಯಕ್ತಿಕ ವಿಭಾಗಗಳಲ್ಲಿಯೂ ಫೈನಲ್ ಪ್ರವೇಶಿಸಿದ್ದಾರೆ.
ಈ ಬಾರಿಯ ಕ್ರೀಡಾಕೂಟದಲ್ಲಿ ಇದು ಭಾರತದಲ್ಲಿ ಭಾರತ ಗೆದ್ದ 16ನೇ ಚಿನ್ನದ ಪದಕ ಇದಾಗಿದೆ. ಇದರೊಂದಿಗೆ ಭಾರತ 25 ಬೆಳ್ಳಿ ಹಾಗೂ 29 ಕಂಚಿನ ಪದಕಗಳನ್ನೂ ಜಯಿಸಿದೆ. ಹೀಗಾಗಿ ಈ ಬಾರಿ ಗೆದ್ದ ಒಟ್ಟಾರೆ ಪದಕಗಳ ಸಂಖ್ಯೆಯನ್ನು 71ಕ್ಕೆ ಹೆಚ್ಚಿಸಿಕೊಂಡಿದೆ.2018ರಲ್ಲಿ ಇಂಡೊನೇಷ್ಯಾದಲ್ಲಿ ನಡೆದಿದ್ದ ಕೂಟದಲ್ಲಿ 70 ಪದಕ ಗಳಿಸಿದ್ದು ಶ್ರೇಷ್ಠ ಸಾಧನೆಯಾಗಿತ್ತು.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…