ಬೆಂಗಳೂರು : ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆಯಾಗಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ ಎಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ಏಷ್ಯನ್ ಗೇಮ್ಸ್ನಲ್ಲಿ ಭಾರತ ಈ ಬಾರಿ 28 ಚಿನ್ನ, 38 ರಜತ ಹಾಗೂ 41 ಕಂಚಿನ ಪದಕಗಳೊಂದಿಗೆ ಒಟ್ಟು 107 ಪದಕಗಳ ಅಭೂತಪೂರ್ವ ಸಾಧನೆಗೈದಿದೆ. ಪದಕ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆಗಳು. ತಮ್ಮ ಸಾಧನೆ ಪ್ರತಿ ಭಾರತೀಯನಿಗೂ ಹೆಮ್ಮೆಯುಂಟುಮಾಡಿದೆ.
ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆ ಎಂದು ಭಾವಿಸಿದ್ದೇನೆ. ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ’ ಎಂದು ಹಾರೈಸಿದ್ದಾರೆ.
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…