ಬೆಂಗಳೂರು : ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆಯಾಗಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ ಎಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ಏಷ್ಯನ್ ಗೇಮ್ಸ್ನಲ್ಲಿ ಭಾರತ ಈ ಬಾರಿ 28 ಚಿನ್ನ, 38 ರಜತ ಹಾಗೂ 41 ಕಂಚಿನ ಪದಕಗಳೊಂದಿಗೆ ಒಟ್ಟು 107 ಪದಕಗಳ ಅಭೂತಪೂರ್ವ ಸಾಧನೆಗೈದಿದೆ. ಪದಕ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆಗಳು. ತಮ್ಮ ಸಾಧನೆ ಪ್ರತಿ ಭಾರತೀಯನಿಗೂ ಹೆಮ್ಮೆಯುಂಟುಮಾಡಿದೆ.
ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆ ಎಂದು ಭಾವಿಸಿದ್ದೇನೆ. ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ’ ಎಂದು ಹಾರೈಸಿದ್ದಾರೆ.
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…