ಬೆಂಗಳೂರು : ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆಯಾಗಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ ಎಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ಏಷ್ಯನ್ ಗೇಮ್ಸ್ನಲ್ಲಿ ಭಾರತ ಈ ಬಾರಿ 28 ಚಿನ್ನ, 38 ರಜತ ಹಾಗೂ 41 ಕಂಚಿನ ಪದಕಗಳೊಂದಿಗೆ ಒಟ್ಟು 107 ಪದಕಗಳ ಅಭೂತಪೂರ್ವ ಸಾಧನೆಗೈದಿದೆ. ಪದಕ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆಗಳು. ತಮ್ಮ ಸಾಧನೆ ಪ್ರತಿ ಭಾರತೀಯನಿಗೂ ಹೆಮ್ಮೆಯುಂಟುಮಾಡಿದೆ.
ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆ ಎಂದು ಭಾವಿಸಿದ್ದೇನೆ. ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ’ ಎಂದು ಹಾರೈಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…