ಕ್ರೀಡೆ

ಏಷ್ಯನ್‌ ಗೇಮ್ಸ್‌: ಹಾಕಿ- ಜಪಾನ್ ಮಣಿಸಿ ಚಿನ್ನದ ಪದಕ ಗೆದ್ದ ಭಾರತ

ಹಾಂಗ್‌ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಜಪಾನ್ ತಂಡವನ್ನು 5-1 ಅಂತರದ ಗೋಲುಗಳಿಂದ ಮಣಿಸಿದ ಭಾರತ ಪುರುಷರ ತಂಡ ಚಿನ್ನದ ಪದಕ ಜಯಿಸಿದೆ.

ಈ ಮೂಲಕ ಈ ವರ್ಷದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ 22ನೇ ಚಿನ್ನದ ಪದಕ ಸಿಕ್ಕಿದೆ. ಈ ಮೂಲಕ ಭಾರತವು ನೂರು ಪದಕಗಳ ಗಡಿ ದಾಟುವುದು ಖಚಿತಪಟ್ಟಿದೆ. ಏಷ್ಯನ್ ಗೇಮ್ಸ್‌ನಲ್ಲಿ ಭಾರತವು 100 ಪದಕಗಳ ಗಡಿ ದಾಟುತ್ತಿರುವುದು ಇದೇ ಮೊದಲು. ಭಾರತ ಈಗಾಗಲೇ 95 ಪದಕಗಳನ್ನು ಗೆದ್ದಿದೆ. ಅರು ಇತರ ಪದಕಗಳನ್ನು ಕ್ರೀಡಾಪಟುಗಳು ಖಚಿತಪಡಿಸಿದ್ದಾರೆ.

ಮಹಿಳೆಯರ 62 ಕೆಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಭಾರತದ ಸೋನಮ್ ಮತ್ತು ಕಿರಣ್ ಚೀನಾದ ಜಿಯಾ ಲಾಂಗ್ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದಾರೆ. ಸೆಪೆಕ್‌ ಟಕ್ರಾ ಕ್ರೀಡೆಯ ರೆಗು ವಿಭಾಗದಲ್ಲಿ ಮಹಿಳೆಯರ ತಂಡವು ಸೆಮಿಫೈನಲ್‌ನಲ್ಲಿ ಥಾಯ್ಲೆಂಡ್ ವಿರುದ್ಧ ಸೋತು ಐತಿಹಾಸಿಕ ಕಂಚಿನ ಪದಕವನ್ನು ಗೆದ್ದುಕೊಂಡಿತು.

ಪುರುಷರ ಮತ್ತು ಮಹಿಳೆಯರ ಕಬಡ್ಡಿ ತಂಡಗಳು ಫೈನಲ್ ತಲುಪಿದ್ದು ಭಾರತಕ್ಕೆ ಇನ್ನೂ ಎರಡು ಬೆಳ್ಳಿ ಪದಕ ಖಚಿತವಾಗಿದೆ. ಆರ್ಚರಿಯಲ್ಲಿ ಪುರುಷರ ರಿಕರ್ವ್ ತಂಡ ಬೆಳ್ಳಿ ಪದಕ ಗೆದ್ದರೆ, ಮಹಿಳೆಯರ ರಿಕರ್ವ್ ತಂಡ ಕಂಚಿನ ಪದಕಕ್ಕೆ ಮುತ್ತಿಟ್ಟಿದೆ. ಋತುರಾಜ್ ಗಾಯಕ್ವಾಡ್ ನೇತೃತ್ವದ ಪುರುಷರ ಕ್ರಿಕೆಟ್ ತಂಡವು ಏಷ್ಯನ್ ಗೇಮ್ಸ್ನ ಫೈನಲ್‌ಗೆ ಪ್ರವೇಶಿಸಿದ್ದು, ರಾಷ್ಟ್ರಕ್ಕೆ ಕನಿಷ್ಠ ಬೆಳ್ಳಿ ಪದಕದ ಭರವಸೆ ಸಿಕ್ಕಿದೆ. ಫೈನಲ್‌ನಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದೆ.

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

8 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

8 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

9 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

10 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

10 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

10 hours ago