ಕ್ರೀಡೆ

ಏಷ್ಯನ್‌ ಗೇಮ್ಸ್‌: ಹಾಕಿ- ಜಪಾನ್ ಮಣಿಸಿ ಚಿನ್ನದ ಪದಕ ಗೆದ್ದ ಭಾರತ

ಹಾಂಗ್‌ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಜಪಾನ್ ತಂಡವನ್ನು 5-1 ಅಂತರದ ಗೋಲುಗಳಿಂದ ಮಣಿಸಿದ ಭಾರತ ಪುರುಷರ ತಂಡ ಚಿನ್ನದ ಪದಕ ಜಯಿಸಿದೆ.

ಈ ಮೂಲಕ ಈ ವರ್ಷದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ 22ನೇ ಚಿನ್ನದ ಪದಕ ಸಿಕ್ಕಿದೆ. ಈ ಮೂಲಕ ಭಾರತವು ನೂರು ಪದಕಗಳ ಗಡಿ ದಾಟುವುದು ಖಚಿತಪಟ್ಟಿದೆ. ಏಷ್ಯನ್ ಗೇಮ್ಸ್‌ನಲ್ಲಿ ಭಾರತವು 100 ಪದಕಗಳ ಗಡಿ ದಾಟುತ್ತಿರುವುದು ಇದೇ ಮೊದಲು. ಭಾರತ ಈಗಾಗಲೇ 95 ಪದಕಗಳನ್ನು ಗೆದ್ದಿದೆ. ಅರು ಇತರ ಪದಕಗಳನ್ನು ಕ್ರೀಡಾಪಟುಗಳು ಖಚಿತಪಡಿಸಿದ್ದಾರೆ.

ಮಹಿಳೆಯರ 62 ಕೆಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಭಾರತದ ಸೋನಮ್ ಮತ್ತು ಕಿರಣ್ ಚೀನಾದ ಜಿಯಾ ಲಾಂಗ್ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದಾರೆ. ಸೆಪೆಕ್‌ ಟಕ್ರಾ ಕ್ರೀಡೆಯ ರೆಗು ವಿಭಾಗದಲ್ಲಿ ಮಹಿಳೆಯರ ತಂಡವು ಸೆಮಿಫೈನಲ್‌ನಲ್ಲಿ ಥಾಯ್ಲೆಂಡ್ ವಿರುದ್ಧ ಸೋತು ಐತಿಹಾಸಿಕ ಕಂಚಿನ ಪದಕವನ್ನು ಗೆದ್ದುಕೊಂಡಿತು.

ಪುರುಷರ ಮತ್ತು ಮಹಿಳೆಯರ ಕಬಡ್ಡಿ ತಂಡಗಳು ಫೈನಲ್ ತಲುಪಿದ್ದು ಭಾರತಕ್ಕೆ ಇನ್ನೂ ಎರಡು ಬೆಳ್ಳಿ ಪದಕ ಖಚಿತವಾಗಿದೆ. ಆರ್ಚರಿಯಲ್ಲಿ ಪುರುಷರ ರಿಕರ್ವ್ ತಂಡ ಬೆಳ್ಳಿ ಪದಕ ಗೆದ್ದರೆ, ಮಹಿಳೆಯರ ರಿಕರ್ವ್ ತಂಡ ಕಂಚಿನ ಪದಕಕ್ಕೆ ಮುತ್ತಿಟ್ಟಿದೆ. ಋತುರಾಜ್ ಗಾಯಕ್ವಾಡ್ ನೇತೃತ್ವದ ಪುರುಷರ ಕ್ರಿಕೆಟ್ ತಂಡವು ಏಷ್ಯನ್ ಗೇಮ್ಸ್ನ ಫೈನಲ್‌ಗೆ ಪ್ರವೇಶಿಸಿದ್ದು, ರಾಷ್ಟ್ರಕ್ಕೆ ಕನಿಷ್ಠ ಬೆಳ್ಳಿ ಪದಕದ ಭರವಸೆ ಸಿಕ್ಕಿದೆ. ಫೈನಲ್‌ನಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದೆ.

andolanait

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

3 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

3 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

4 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

4 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

4 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

4 hours ago