ಕ್ರೀಡೆ

ಏಷ್ಯನ್‌ ಗೇಮ್ಸ್‌: ಹಾಕಿ- ಜಪಾನ್ ಮಣಿಸಿ ಚಿನ್ನದ ಪದಕ ಗೆದ್ದ ಭಾರತ

ಹಾಂಗ್‌ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಜಪಾನ್ ತಂಡವನ್ನು 5-1 ಅಂತರದ ಗೋಲುಗಳಿಂದ ಮಣಿಸಿದ ಭಾರತ ಪುರುಷರ ತಂಡ ಚಿನ್ನದ ಪದಕ ಜಯಿಸಿದೆ.

ಈ ಮೂಲಕ ಈ ವರ್ಷದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ 22ನೇ ಚಿನ್ನದ ಪದಕ ಸಿಕ್ಕಿದೆ. ಈ ಮೂಲಕ ಭಾರತವು ನೂರು ಪದಕಗಳ ಗಡಿ ದಾಟುವುದು ಖಚಿತಪಟ್ಟಿದೆ. ಏಷ್ಯನ್ ಗೇಮ್ಸ್‌ನಲ್ಲಿ ಭಾರತವು 100 ಪದಕಗಳ ಗಡಿ ದಾಟುತ್ತಿರುವುದು ಇದೇ ಮೊದಲು. ಭಾರತ ಈಗಾಗಲೇ 95 ಪದಕಗಳನ್ನು ಗೆದ್ದಿದೆ. ಅರು ಇತರ ಪದಕಗಳನ್ನು ಕ್ರೀಡಾಪಟುಗಳು ಖಚಿತಪಡಿಸಿದ್ದಾರೆ.

ಮಹಿಳೆಯರ 62 ಕೆಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಭಾರತದ ಸೋನಮ್ ಮತ್ತು ಕಿರಣ್ ಚೀನಾದ ಜಿಯಾ ಲಾಂಗ್ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದಾರೆ. ಸೆಪೆಕ್‌ ಟಕ್ರಾ ಕ್ರೀಡೆಯ ರೆಗು ವಿಭಾಗದಲ್ಲಿ ಮಹಿಳೆಯರ ತಂಡವು ಸೆಮಿಫೈನಲ್‌ನಲ್ಲಿ ಥಾಯ್ಲೆಂಡ್ ವಿರುದ್ಧ ಸೋತು ಐತಿಹಾಸಿಕ ಕಂಚಿನ ಪದಕವನ್ನು ಗೆದ್ದುಕೊಂಡಿತು.

ಪುರುಷರ ಮತ್ತು ಮಹಿಳೆಯರ ಕಬಡ್ಡಿ ತಂಡಗಳು ಫೈನಲ್ ತಲುಪಿದ್ದು ಭಾರತಕ್ಕೆ ಇನ್ನೂ ಎರಡು ಬೆಳ್ಳಿ ಪದಕ ಖಚಿತವಾಗಿದೆ. ಆರ್ಚರಿಯಲ್ಲಿ ಪುರುಷರ ರಿಕರ್ವ್ ತಂಡ ಬೆಳ್ಳಿ ಪದಕ ಗೆದ್ದರೆ, ಮಹಿಳೆಯರ ರಿಕರ್ವ್ ತಂಡ ಕಂಚಿನ ಪದಕಕ್ಕೆ ಮುತ್ತಿಟ್ಟಿದೆ. ಋತುರಾಜ್ ಗಾಯಕ್ವಾಡ್ ನೇತೃತ್ವದ ಪುರುಷರ ಕ್ರಿಕೆಟ್ ತಂಡವು ಏಷ್ಯನ್ ಗೇಮ್ಸ್ನ ಫೈನಲ್‌ಗೆ ಪ್ರವೇಶಿಸಿದ್ದು, ರಾಷ್ಟ್ರಕ್ಕೆ ಕನಿಷ್ಠ ಬೆಳ್ಳಿ ಪದಕದ ಭರವಸೆ ಸಿಕ್ಕಿದೆ. ಫೈನಲ್‌ನಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲಿದೆ.

andolanait

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

5 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

6 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

6 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

6 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

7 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

7 hours ago