ಹಾಂಗ್ಝೌ : ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಮಂದೀಪ್ ಸಿಂಗ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಸಿಂಗಪುರ ವಿರುದ್ಧದ ಹಾಕಿ ಪಂದ್ಯದಲ್ಲಿ ಭಾರತ ತಂಡ 16-1 ಗೋಲುಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿದೆ.
ಪಂದ್ಯಾವಳಿಯಲ್ಲಿ ಭಾರತಕ್ಕೆ ಇದು ಎರಡನೇ ಸತತ ಗೆಲುವಾಗಿದೆ. ಉಜೈಕಿಸ್ತಾನ ವಿರುದ್ಧದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ 16-0 ಅಂತರದ ಜಯ ಸಾಧಿಸಿದ್ದ ಭಾರತ ತಂಡ ಗೆಲುವಿನ ಓಟ ಮುಂದುವರಿಸಿದೆ.
ಹರ್ಮನ್ ಪ್ರೀತ್ (24, 39, 40, 42ನೇ ನಿಮಿಷ) ಮತ್ತು ಮಂದೀಪ್ (12, 30, 51ನೇ ನಿಮಿಷ), ಅಭಿಷೇಕ್ (51, 52ನೇ ನಿಮಿಷ), ವರುಣ್ ಕುಮಾರ್ (55, 55ನೇ ನಿಮಿಷ), ಲಲಿತ್ ಕುಮಾರ್ ಉಪಾಧ್ಯಾಯ (16ನೇ ನಿಮಿಷ), ಗುರ್ಜಂತ್ ಸಿಂಗ್ (22ನೇ ನಿಮಿಷ), ವಿವೇಕ್ ಸಾಗರ್ ಪ್ರಸಾದ್ (23ನೇ ನಿಮಿಷ), ಮನ್ ಪ್ರೀತ್ ಸಿಂಗ್ (37ನೇ ನಿಮಿಷ), ಶಂಶೇರ್ ಸಿಂಗ್ (38ನೇ ನಿಮಿಷ) ಗೋಲು ಗಳಿಸಿದರು.
ಭಾರತವು ಗುರುವಾರ ಹಾಲಿ ಚಾಂಪಿಯನ್ ಜಪಾನ್ ಅನ್ನು ಎದುರಿಸಲಿದೆ.
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…