ಹಾಂಗ್ಝೌ : ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಮಂದೀಪ್ ಸಿಂಗ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಸಿಂಗಪುರ ವಿರುದ್ಧದ ಹಾಕಿ ಪಂದ್ಯದಲ್ಲಿ ಭಾರತ ತಂಡ 16-1 ಗೋಲುಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿದೆ.
ಪಂದ್ಯಾವಳಿಯಲ್ಲಿ ಭಾರತಕ್ಕೆ ಇದು ಎರಡನೇ ಸತತ ಗೆಲುವಾಗಿದೆ. ಉಜೈಕಿಸ್ತಾನ ವಿರುದ್ಧದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ 16-0 ಅಂತರದ ಜಯ ಸಾಧಿಸಿದ್ದ ಭಾರತ ತಂಡ ಗೆಲುವಿನ ಓಟ ಮುಂದುವರಿಸಿದೆ.
ಹರ್ಮನ್ ಪ್ರೀತ್ (24, 39, 40, 42ನೇ ನಿಮಿಷ) ಮತ್ತು ಮಂದೀಪ್ (12, 30, 51ನೇ ನಿಮಿಷ), ಅಭಿಷೇಕ್ (51, 52ನೇ ನಿಮಿಷ), ವರುಣ್ ಕುಮಾರ್ (55, 55ನೇ ನಿಮಿಷ), ಲಲಿತ್ ಕುಮಾರ್ ಉಪಾಧ್ಯಾಯ (16ನೇ ನಿಮಿಷ), ಗುರ್ಜಂತ್ ಸಿಂಗ್ (22ನೇ ನಿಮಿಷ), ವಿವೇಕ್ ಸಾಗರ್ ಪ್ರಸಾದ್ (23ನೇ ನಿಮಿಷ), ಮನ್ ಪ್ರೀತ್ ಸಿಂಗ್ (37ನೇ ನಿಮಿಷ), ಶಂಶೇರ್ ಸಿಂಗ್ (38ನೇ ನಿಮಿಷ) ಗೋಲು ಗಳಿಸಿದರು.
ಭಾರತವು ಗುರುವಾರ ಹಾಲಿ ಚಾಂಪಿಯನ್ ಜಪಾನ್ ಅನ್ನು ಎದುರಿಸಲಿದೆ.
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…