ಕ್ರೀಡೆ

ಏಶ್ಯನ್‌ ಗೇಮ್ಸ್‌: ಸ್ಕ್ವಾಶ್‌ನಲ್ಲಿ ಪಾಕಿಸ್ತಾನ ಸೋಲಿಸಿ ಚಿನ್ನ ಗೆದ್ದ ಭಾರತ

ಹಾಂಗ್‌ಝೌ : ಏಶ್ಯನ್‌ ಗೇಮ್ಸ್‌ನ ಸ್ಕ್ವಾಶ್‌ನಲ್ಲಿ ಭಾರತದ ಪುರುಷರ ತಂಡ ಐತಿಹಾಸಿಕ ಚಿನ್ನದ ಪದಕ ತನ್ನದಾಗಿಸಿಕೊಂಡಿದೆ. ಶನಿವಾರ ನಡೆದ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ಸಾಧಿಸಿ ಬಂಗಾರ ಪಡೆಯಿತು.

ಪಾಕಿಸ್ತಾನದ ನೂರ್ ಜಮಾನ್ ಅವರನ್ನು ಭಾರತದ ಅಭಯ್ ಸಿಂಗ್ ಸೀಸಾ ಡಿಸೈಡ್‌ನಲ್ಲಿ 3-2 ಅಂತರದಲ್ಲಿ ಮಣಿಸಿದರು. ಆ ಮೂಲಕ ಭಾರತ ಮತ್ತೊಮ್ಮೆ ಸ್ಕ್ವಾಷ್ ನಲ್ಲಿ ಚಿನ್ನದ ಪದಕ ಜಯಿಸಿದೆ.

ಮತ್ತೊಂದೆಡೆ ಭಾರತದ ಮತ್ತೋರ್ವ ಆಟಗಾರ ಮಹೇಶ್ ಮಂಗಾಂವ್ಕರ್ ಪಾಕಿಸ್ತಾನದ ಇಕ್ಬಾಲ್ ನಾಸಿರ್‌ಗೆ ಓಪನರ್‌ನಲ್ಲಿ ಒಂದೇ ಅಂತರದಿಂದ ಸೋತ ನಂತರ ಅನುಭವಿ ಸೌರವ್ ಘೋಸಲ್ ಅವರು ಮುಹಮ್ಮದ್ ಅಸಿಮ್ ಖಾನ್ ವಿರುದ್ಧ 3-0 ಗೆಲುವಿನೊಂದಿಗೆ ಭಾರತೀಯರನ್ನು ಮತ್ತೆ ಸ್ಪರ್ಧೆಗೆ ತಂದರು. ಅಂತಿಮವಾಗಿ ಈ ರೋಚಕ ಹಣಾಹಣಿಯಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಮಣಿಸಿ ಪದಕ ಜಯಿಸಿದೆ.

ಈ ಹಿಂದೆ ಇದೇ ಕ್ರೀಡಾಕೂಟದ ಲೀಗ್ ಹಂತದ ಪಂದ್ಯದಲ್ಲಿ ಭಾರತ ಇದೇ ಪಾಕಿಸ್ತಾನ ಜೋಡಿಯ ವಿರುದ್ದ ಸೋಲುಕಂಡಿತ್ತು. ಆದರೆ ಫೈನಲ್ ನಲ್ಲಿ ಇದೇ ಜೋಡಿಯನ್ನು ಮಣಿಸುವ ಮೂಲಕ ತನ್ನ ಸೋಲಿನ ಸೇಡು ತೀರಿಸಿಕೊಂಡಿದೆ.

ಭಾರತ ಕೊನೆಯ ಬಾರಿಗೆ 2014 ರಲ್ಲಿ ಇಂಚೆನ್‌ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಪುರುಷರ ತಂಡ ಸ್ಕ್ವಾಷ್‌ನಲ್ಲಿ ಚಿನ್ನ ಗೆದ್ದಿದ್ದರೆ, ಪಾಕಿಸ್ತಾನಿಗಳು 2010 ರಲ್ಲಿ ಗುವಾಂಗ್‌ಝೌನಲ್ಲಿ ಕೊನೆಯದಾಗಿ ಚಿನ್ನವನ್ನು ಗೆದ್ದಿದ್ದರು.

ಶನಿವಾರ ಭಾರತ ಮಹಿಳಾ ತಂಡ, ಸೆಮಿಫೈನಲ್‌ನಲ್ಲಿ ಹಾಂಕಾಂಗ್‌ ವಿರುದ್ಧ 1-2 ಅಂತರದಲ್ಲಿ ಸೋತು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು.

andolanait

Recent Posts

ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಆಗ್ರಹ

ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ…

5 mins ago

ಬೌದ್ಧ ಧರ್ಮಗುರು ದಲೈಲಾಮಾಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಗೌರವ

ಟಿಬೆಟ್‌ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…

1 hour ago

ಮಂಡ್ಯ| ಸಿದ್ಧಗಂಗಾಶ್ರೀಗಳ ಆದರ್ಶ ಅಜರಾಮರ: ಯು.ಸಿ.ಶಿವಕುಮಾರ್‌

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ…

1 hour ago

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

2 hours ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

2 hours ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

3 hours ago