ಕ್ರೀಡೆ

ಏಶ್ಯನ್‌ ಗೇಮ್ಸ್‌: ಸ್ಕ್ವಾಶ್‌ನಲ್ಲಿ ಪಾಕಿಸ್ತಾನ ಸೋಲಿಸಿ ಚಿನ್ನ ಗೆದ್ದ ಭಾರತ

ಹಾಂಗ್‌ಝೌ : ಏಶ್ಯನ್‌ ಗೇಮ್ಸ್‌ನ ಸ್ಕ್ವಾಶ್‌ನಲ್ಲಿ ಭಾರತದ ಪುರುಷರ ತಂಡ ಐತಿಹಾಸಿಕ ಚಿನ್ನದ ಪದಕ ತನ್ನದಾಗಿಸಿಕೊಂಡಿದೆ. ಶನಿವಾರ ನಡೆದ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ಸಾಧಿಸಿ ಬಂಗಾರ ಪಡೆಯಿತು.

ಪಾಕಿಸ್ತಾನದ ನೂರ್ ಜಮಾನ್ ಅವರನ್ನು ಭಾರತದ ಅಭಯ್ ಸಿಂಗ್ ಸೀಸಾ ಡಿಸೈಡ್‌ನಲ್ಲಿ 3-2 ಅಂತರದಲ್ಲಿ ಮಣಿಸಿದರು. ಆ ಮೂಲಕ ಭಾರತ ಮತ್ತೊಮ್ಮೆ ಸ್ಕ್ವಾಷ್ ನಲ್ಲಿ ಚಿನ್ನದ ಪದಕ ಜಯಿಸಿದೆ.

ಮತ್ತೊಂದೆಡೆ ಭಾರತದ ಮತ್ತೋರ್ವ ಆಟಗಾರ ಮಹೇಶ್ ಮಂಗಾಂವ್ಕರ್ ಪಾಕಿಸ್ತಾನದ ಇಕ್ಬಾಲ್ ನಾಸಿರ್‌ಗೆ ಓಪನರ್‌ನಲ್ಲಿ ಒಂದೇ ಅಂತರದಿಂದ ಸೋತ ನಂತರ ಅನುಭವಿ ಸೌರವ್ ಘೋಸಲ್ ಅವರು ಮುಹಮ್ಮದ್ ಅಸಿಮ್ ಖಾನ್ ವಿರುದ್ಧ 3-0 ಗೆಲುವಿನೊಂದಿಗೆ ಭಾರತೀಯರನ್ನು ಮತ್ತೆ ಸ್ಪರ್ಧೆಗೆ ತಂದರು. ಅಂತಿಮವಾಗಿ ಈ ರೋಚಕ ಹಣಾಹಣಿಯಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಮಣಿಸಿ ಪದಕ ಜಯಿಸಿದೆ.

ಈ ಹಿಂದೆ ಇದೇ ಕ್ರೀಡಾಕೂಟದ ಲೀಗ್ ಹಂತದ ಪಂದ್ಯದಲ್ಲಿ ಭಾರತ ಇದೇ ಪಾಕಿಸ್ತಾನ ಜೋಡಿಯ ವಿರುದ್ದ ಸೋಲುಕಂಡಿತ್ತು. ಆದರೆ ಫೈನಲ್ ನಲ್ಲಿ ಇದೇ ಜೋಡಿಯನ್ನು ಮಣಿಸುವ ಮೂಲಕ ತನ್ನ ಸೋಲಿನ ಸೇಡು ತೀರಿಸಿಕೊಂಡಿದೆ.

ಭಾರತ ಕೊನೆಯ ಬಾರಿಗೆ 2014 ರಲ್ಲಿ ಇಂಚೆನ್‌ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಪುರುಷರ ತಂಡ ಸ್ಕ್ವಾಷ್‌ನಲ್ಲಿ ಚಿನ್ನ ಗೆದ್ದಿದ್ದರೆ, ಪಾಕಿಸ್ತಾನಿಗಳು 2010 ರಲ್ಲಿ ಗುವಾಂಗ್‌ಝೌನಲ್ಲಿ ಕೊನೆಯದಾಗಿ ಚಿನ್ನವನ್ನು ಗೆದ್ದಿದ್ದರು.

ಶನಿವಾರ ಭಾರತ ಮಹಿಳಾ ತಂಡ, ಸೆಮಿಫೈನಲ್‌ನಲ್ಲಿ ಹಾಂಕಾಂಗ್‌ ವಿರುದ್ಧ 1-2 ಅಂತರದಲ್ಲಿ ಸೋತು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು.

andolanait

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

18 mins ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

3 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

4 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

4 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

4 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

5 hours ago