ಕ್ರೀಡೆ

ಏಶ್ಯನ್‌ ಗೇಮ್ಸ್‌: ಸ್ಕ್ವಾಶ್‌ನಲ್ಲಿ ಪಾಕಿಸ್ತಾನ ಸೋಲಿಸಿ ಚಿನ್ನ ಗೆದ್ದ ಭಾರತ

ಹಾಂಗ್‌ಝೌ : ಏಶ್ಯನ್‌ ಗೇಮ್ಸ್‌ನ ಸ್ಕ್ವಾಶ್‌ನಲ್ಲಿ ಭಾರತದ ಪುರುಷರ ತಂಡ ಐತಿಹಾಸಿಕ ಚಿನ್ನದ ಪದಕ ತನ್ನದಾಗಿಸಿಕೊಂಡಿದೆ. ಶನಿವಾರ ನಡೆದ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ಸಾಧಿಸಿ ಬಂಗಾರ ಪಡೆಯಿತು.

ಪಾಕಿಸ್ತಾನದ ನೂರ್ ಜಮಾನ್ ಅವರನ್ನು ಭಾರತದ ಅಭಯ್ ಸಿಂಗ್ ಸೀಸಾ ಡಿಸೈಡ್‌ನಲ್ಲಿ 3-2 ಅಂತರದಲ್ಲಿ ಮಣಿಸಿದರು. ಆ ಮೂಲಕ ಭಾರತ ಮತ್ತೊಮ್ಮೆ ಸ್ಕ್ವಾಷ್ ನಲ್ಲಿ ಚಿನ್ನದ ಪದಕ ಜಯಿಸಿದೆ.

ಮತ್ತೊಂದೆಡೆ ಭಾರತದ ಮತ್ತೋರ್ವ ಆಟಗಾರ ಮಹೇಶ್ ಮಂಗಾಂವ್ಕರ್ ಪಾಕಿಸ್ತಾನದ ಇಕ್ಬಾಲ್ ನಾಸಿರ್‌ಗೆ ಓಪನರ್‌ನಲ್ಲಿ ಒಂದೇ ಅಂತರದಿಂದ ಸೋತ ನಂತರ ಅನುಭವಿ ಸೌರವ್ ಘೋಸಲ್ ಅವರು ಮುಹಮ್ಮದ್ ಅಸಿಮ್ ಖಾನ್ ವಿರುದ್ಧ 3-0 ಗೆಲುವಿನೊಂದಿಗೆ ಭಾರತೀಯರನ್ನು ಮತ್ತೆ ಸ್ಪರ್ಧೆಗೆ ತಂದರು. ಅಂತಿಮವಾಗಿ ಈ ರೋಚಕ ಹಣಾಹಣಿಯಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಮಣಿಸಿ ಪದಕ ಜಯಿಸಿದೆ.

ಈ ಹಿಂದೆ ಇದೇ ಕ್ರೀಡಾಕೂಟದ ಲೀಗ್ ಹಂತದ ಪಂದ್ಯದಲ್ಲಿ ಭಾರತ ಇದೇ ಪಾಕಿಸ್ತಾನ ಜೋಡಿಯ ವಿರುದ್ದ ಸೋಲುಕಂಡಿತ್ತು. ಆದರೆ ಫೈನಲ್ ನಲ್ಲಿ ಇದೇ ಜೋಡಿಯನ್ನು ಮಣಿಸುವ ಮೂಲಕ ತನ್ನ ಸೋಲಿನ ಸೇಡು ತೀರಿಸಿಕೊಂಡಿದೆ.

ಭಾರತ ಕೊನೆಯ ಬಾರಿಗೆ 2014 ರಲ್ಲಿ ಇಂಚೆನ್‌ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಪುರುಷರ ತಂಡ ಸ್ಕ್ವಾಷ್‌ನಲ್ಲಿ ಚಿನ್ನ ಗೆದ್ದಿದ್ದರೆ, ಪಾಕಿಸ್ತಾನಿಗಳು 2010 ರಲ್ಲಿ ಗುವಾಂಗ್‌ಝೌನಲ್ಲಿ ಕೊನೆಯದಾಗಿ ಚಿನ್ನವನ್ನು ಗೆದ್ದಿದ್ದರು.

ಶನಿವಾರ ಭಾರತ ಮಹಿಳಾ ತಂಡ, ಸೆಮಿಫೈನಲ್‌ನಲ್ಲಿ ಹಾಂಕಾಂಗ್‌ ವಿರುದ್ಧ 1-2 ಅಂತರದಲ್ಲಿ ಸೋತು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago