ಹಾಂಗ್ಝೌ : ಏಶ್ಯನ್ ಗೇಮ್ಸ್ನ ಸ್ಕ್ವಾಶ್ನಲ್ಲಿ ಭಾರತದ ಪುರುಷರ ತಂಡ ಐತಿಹಾಸಿಕ ಚಿನ್ನದ ಪದಕ ತನ್ನದಾಗಿಸಿಕೊಂಡಿದೆ. ಶನಿವಾರ ನಡೆದ ಫೈನಲ್ನಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ಸಾಧಿಸಿ ಬಂಗಾರ ಪಡೆಯಿತು.
ಪಾಕಿಸ್ತಾನದ ನೂರ್ ಜಮಾನ್ ಅವರನ್ನು ಭಾರತದ ಅಭಯ್ ಸಿಂಗ್ ಸೀಸಾ ಡಿಸೈಡ್ನಲ್ಲಿ 3-2 ಅಂತರದಲ್ಲಿ ಮಣಿಸಿದರು. ಆ ಮೂಲಕ ಭಾರತ ಮತ್ತೊಮ್ಮೆ ಸ್ಕ್ವಾಷ್ ನಲ್ಲಿ ಚಿನ್ನದ ಪದಕ ಜಯಿಸಿದೆ.
ಮತ್ತೊಂದೆಡೆ ಭಾರತದ ಮತ್ತೋರ್ವ ಆಟಗಾರ ಮಹೇಶ್ ಮಂಗಾಂವ್ಕರ್ ಪಾಕಿಸ್ತಾನದ ಇಕ್ಬಾಲ್ ನಾಸಿರ್ಗೆ ಓಪನರ್ನಲ್ಲಿ ಒಂದೇ ಅಂತರದಿಂದ ಸೋತ ನಂತರ ಅನುಭವಿ ಸೌರವ್ ಘೋಸಲ್ ಅವರು ಮುಹಮ್ಮದ್ ಅಸಿಮ್ ಖಾನ್ ವಿರುದ್ಧ 3-0 ಗೆಲುವಿನೊಂದಿಗೆ ಭಾರತೀಯರನ್ನು ಮತ್ತೆ ಸ್ಪರ್ಧೆಗೆ ತಂದರು. ಅಂತಿಮವಾಗಿ ಈ ರೋಚಕ ಹಣಾಹಣಿಯಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಮಣಿಸಿ ಪದಕ ಜಯಿಸಿದೆ.
ಈ ಹಿಂದೆ ಇದೇ ಕ್ರೀಡಾಕೂಟದ ಲೀಗ್ ಹಂತದ ಪಂದ್ಯದಲ್ಲಿ ಭಾರತ ಇದೇ ಪಾಕಿಸ್ತಾನ ಜೋಡಿಯ ವಿರುದ್ದ ಸೋಲುಕಂಡಿತ್ತು. ಆದರೆ ಫೈನಲ್ ನಲ್ಲಿ ಇದೇ ಜೋಡಿಯನ್ನು ಮಣಿಸುವ ಮೂಲಕ ತನ್ನ ಸೋಲಿನ ಸೇಡು ತೀರಿಸಿಕೊಂಡಿದೆ.
ಭಾರತ ಕೊನೆಯ ಬಾರಿಗೆ 2014 ರಲ್ಲಿ ಇಂಚೆನ್ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಪುರುಷರ ತಂಡ ಸ್ಕ್ವಾಷ್ನಲ್ಲಿ ಚಿನ್ನ ಗೆದ್ದಿದ್ದರೆ, ಪಾಕಿಸ್ತಾನಿಗಳು 2010 ರಲ್ಲಿ ಗುವಾಂಗ್ಝೌನಲ್ಲಿ ಕೊನೆಯದಾಗಿ ಚಿನ್ನವನ್ನು ಗೆದ್ದಿದ್ದರು.
ಶನಿವಾರ ಭಾರತ ಮಹಿಳಾ ತಂಡ, ಸೆಮಿಫೈನಲ್ನಲ್ಲಿ ಹಾಂಕಾಂಗ್ ವಿರುದ್ಧ 1-2 ಅಂತರದಲ್ಲಿ ಸೋತು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…