ಕ್ರೀಡೆ

ಏಶ್ಯನ್‌ ಗೇಮ್ಸ್:‌ ಕುದುರೆ ಸವಾರಿಯಲ್ಲಿ 41 ವರ್ಷಗಳ ನಂತರ ಚಿನ್ನ ಗೆದ್ದ ಭಾರತ

ಹಾಂಗ್‌ಝೌ: ನವದೆಹಲಿಯಲ್ಲಿ 1982ರಲ್ಲಿ ನಡೆದ ಏಷ್ಯನ್ ಕ್ರೀಡೆಯ ನಂತರ ಚೀನಾದ ಹ್ಯಾಂಗ್‌ ಝೂನಲ್ಲಿ ನಡೆಯುತ್ತಿರುವ ಏಶ್ಯನ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ 41 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತದ ತಂಡ ಕುದುರೆ ಸವಾರಿ (ಡೆಸ್ಸೇಜ್‌ ಟೀಮ್‌ ಇವೆಂಟ್) ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ. ‌

ದಿವ್ಯಕೃತಿ ಸಿಂಗ್, ಹೃದಯ್ ವಿಪುಲ್ ಛಡ್ ಹಾಗೂ ಅನ್ನು ಅಗರ್ವಾಲ್ ಅವರಿದ್ದ ತಂಡ 209.205 ಶೇಕಡಾವಾರು ಅಂಕಗಳೊಂದಿಗೆ ಚಿನ್ನಕ್ಕೆ ಮುತ್ತಿಕ್ಕಿತು.

ಇದೇ ತಂಡದಲ್ಲಿ ಸುದೀಪ್ತಿ ಹಜೆವಾಲಾ ಅವರೂ ಇದ್ದರು. ಆದರೆ ಹೆಚ್ಚಿನ ಅಂಕ ಪಡೆದ ಮೊದಲ ಮೂವರ ಹೆಸರನ್ನು ಪರಿಗಣಿಸಲಾಗಿದೆ. 204.882 ಶೇಖಡಾವಾರು ಅಂಕಗಳೊಂದಿಗೆ ಚೀನಾ ಎರಡನೇ ಸ್ಥಾನ ಪಡೆಯಿತು. ಹಾಂಕಾಂಗ್ 204.852 ಅಂಕಗಳೊಂದಿಗೆ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.

1986ರಲ್ಲಿ ನಡೆದ ಇದೇ ಪಂದ್ಯಾವಳಿಯಲ್ಲಿ ಭಾರತ ಕಂಚಿನ ಪದಕ ಪಡೆದುಕೊಂಡಿತ್ತು.

andolanait

Recent Posts

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

13 mins ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

46 mins ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

1 hour ago

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

5 hours ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

5 hours ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

5 hours ago