ಕ್ರೀಡೆ

ಏಶ್ಯನ್‌ ಗೇಮ್ಸ್:‌ ಕುದುರೆ ಸವಾರಿಯಲ್ಲಿ 41 ವರ್ಷಗಳ ನಂತರ ಚಿನ್ನ ಗೆದ್ದ ಭಾರತ

ಹಾಂಗ್‌ಝೌ: ನವದೆಹಲಿಯಲ್ಲಿ 1982ರಲ್ಲಿ ನಡೆದ ಏಷ್ಯನ್ ಕ್ರೀಡೆಯ ನಂತರ ಚೀನಾದ ಹ್ಯಾಂಗ್‌ ಝೂನಲ್ಲಿ ನಡೆಯುತ್ತಿರುವ ಏಶ್ಯನ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ 41 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತದ ತಂಡ ಕುದುರೆ ಸವಾರಿ (ಡೆಸ್ಸೇಜ್‌ ಟೀಮ್‌ ಇವೆಂಟ್) ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ. ‌

ದಿವ್ಯಕೃತಿ ಸಿಂಗ್, ಹೃದಯ್ ವಿಪುಲ್ ಛಡ್ ಹಾಗೂ ಅನ್ನು ಅಗರ್ವಾಲ್ ಅವರಿದ್ದ ತಂಡ 209.205 ಶೇಕಡಾವಾರು ಅಂಕಗಳೊಂದಿಗೆ ಚಿನ್ನಕ್ಕೆ ಮುತ್ತಿಕ್ಕಿತು.

ಇದೇ ತಂಡದಲ್ಲಿ ಸುದೀಪ್ತಿ ಹಜೆವಾಲಾ ಅವರೂ ಇದ್ದರು. ಆದರೆ ಹೆಚ್ಚಿನ ಅಂಕ ಪಡೆದ ಮೊದಲ ಮೂವರ ಹೆಸರನ್ನು ಪರಿಗಣಿಸಲಾಗಿದೆ. 204.882 ಶೇಖಡಾವಾರು ಅಂಕಗಳೊಂದಿಗೆ ಚೀನಾ ಎರಡನೇ ಸ್ಥಾನ ಪಡೆಯಿತು. ಹಾಂಕಾಂಗ್ 204.852 ಅಂಕಗಳೊಂದಿಗೆ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.

1986ರಲ್ಲಿ ನಡೆದ ಇದೇ ಪಂದ್ಯಾವಳಿಯಲ್ಲಿ ಭಾರತ ಕಂಚಿನ ಪದಕ ಪಡೆದುಕೊಂಡಿತ್ತು.

andolanait

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

4 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

5 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

6 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

6 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

7 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

8 hours ago