ಕ್ರೀಡೆ

ಏಷ್ಯನ್ ಗೇಮ್ಸ್ : ಉಜ್ಬೇಕಿಸ್ತಾನ ವಿರುದ್ಧ 16-0 ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ ಭಾರತ ಹಾಕಿ ತಂಡ

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್‌ನ ಮೊದಲ ಪಂದ್ಯದಲ್ಲಿ ಪುರುಷರ ಹಾಕಿ ತಂಡವು ಉಜ್ಬೇಕಿಸ್ತಾನ ವಿರುದ್ಧ 16-0 ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.

ಚೀನಾದ ಹ್ಯಾಂಗ್‌ಝೌನಲ್ಲಿರುವ ಗೊಂಗ್‌ಶು ಕೆನಾಲ್ ಸ್ಪೋರ್ಟ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯನ್ ಗೇಮ್ಸ್ 2023ರ ಪೂಲ್ ಎ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡವು ಗೋಲುಗಳ ಸುರಿಮಳೆಗೈದಿದೆ.

ಮೊದಲ ಪಂದ್ಯದಲ್ಲಿ ಉಜ್ಬೇಕಿಸ್ತಾನ್ ತಂಡವನ್ನು 16-0 ಅಂತರದಿಂದ ಸೋಲಿಸಿದೆ. ನಾಯಕ ಹರ್ವಾನ್ ಪ್ರೀತ್ ಸಿಂಗ್ ಅಲಭ್ಯತೆಯಲ್ಲಿ ಭಾರತ ಕಣಕ್ಕಿಳಿಯಿತು.

ಭಾರತದ ಪರ ಲಲಿತ್ ಉಪಾಧ್ಯಾಯ (7, 24, 37, 53ನೇ ನಿಮಿಷದಲ್ಲಿ) ಮತ್ತು ವರುಣ್ ಕುವಾರ್ (12, 36, 50, 52ನೇ ನಿಮಿಷದಲ್ಲಿ) ತಲಾ 4 ಗೋಲು ಗಳಿಸಿ ಮಿಂಚಿದರು. ಮನದೀಪ್ ಸಿಂಗ್ 3 ಗೋಲು (18, 27, 28ನೇ ನಿಮಿಷದಲ್ಲಿ), ಅಭಿಷೇಕ್ (17ನೇ ನಿ), ಅಮಿತ್ ರೋಹಿದಾಸ್ (38 ನಿ), ಸುಖಜೀತ್ (42 ನಿ), ಶಂಶೇರ್ ಸಿಂಗ್ (42’) ಮತ್ತು ಸಂಜಯ್ (‌57 ನಿ) ತಲಾ ಒಂದು ಗೋಲು ಗಳಿಸಿ ಗೆಲುವಿಗೆ ಕಾರಣರಾದರು.

ಅಗ್ರಸ್ಥಾನಕ್ಕೆ ಏರಿದ ಭಾರತ

ಈ ಸುಲಭ ಗೆಲುವಿನೊಂದಿಗೆ 3 ಬಾರಿ ಏಷ್ಯನ್ ಗೇಮ್ಸ್ ಚಾಂಪಿಯನ್ ಭಾರತವು ಏಷ್ಯನ್ ಗೇಮ್ಸ್ 2023ರ ಪುರುಷರ ಹಾಕಿ ಪೂಲ್ ಎ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿತು. ಪ್ರತಿ ಪೂಲ್‌ನ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಪ್ರವೇಶಿಸುತ್ತದೆ. ಎಫ್‌ಐಎಚ್ ಶ್ರೇಯಾಕದಲ್ಲಿ 3ನೇ ಸ್ಥಾನದಲ್ಲಿರುವ ಭಾರತದ ಪುರುಷರ ಹಾಕಿ ತಂಡವು, ಕಳೆದ ತಿಂಗಳು ತಮ್ಮ ಏಷ್ಯನ್ ಚಾಂಪಿುಂನ್ಸ್ ಟ್ರೋಫಿಗೆ ಮುತ್ತಿಕ್ಕಿತು.

ಪಂದ್ಯದ ಆರಂಭದಿಂದಲೇ ಭಾರತದ ಆಟಗಾರರು ಆಕ್ರಮಣಕಾರಿ ಆಟಕ್ಕೆ ಮುಂದಾದರು. ವಿಶ್ವದ ನಂ. 66 ಉಜ್ಬೇಕಿಸ್ತಾನ ತಂಡಕ್ಕೆ ಗೋಲು ಗಳಿಸಲು ಅವಕಾಶ ನೀಡದೆ, ಮೆನ್ ಇನ್ ಬ್ಲೂ ಗೋಲುಗಳ ಸುರಿಮಳೆಗೈದಿತು. ಇದರೊಂದಿಗೆ ಉಜ್ಬೇಕಿಸ್ತಾನ ತಂಡದ ಮೇಲೆ ಹೆಚ್ಚು ಒತ್ತಡ ಹೇರಿತು. ಪಂದ್ಯದ 7ನೇ ನಿಮಿಷದಲ್ಲಿ ಭಾರತ ಗೋಲು ಮಳೆ, ಪಂದ್ಯದ ಮುಕ್ತಾಯದವರೆಗೂ ನಿಲ್ಲಲಿಲ್ಲ.

lokesh

Recent Posts

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

55 mins ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

1 hour ago

ಬೈಕ್‌ ಟ್ಯಾಕ್ಸಿಗೆ ಒಪ್ಪಿಗೆ: ಸುಪ್ರೀಂಕೋರ್ಟ್‌ ಮೊರೆ ಹೋಗಲಿದೆ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್‌ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್‌ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…

2 hours ago

ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ: ರೈತ ಹಳ್ಳಿಕೆರೆಹುಂಡಿ ಭಾಗ್ಯರಾಜ್

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌ ಆಗಿದೆ…

2 hours ago

ಹಿರೀಕಾಟಿಯಲ್ಲಿ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣ ಸಂಬಂಧ ಮುಖಂಡರೊಂದಿಗೆ ಚರ್ಚೆ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…

3 hours ago

ರಾಮನಗರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಸಾವು

ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್‌…

3 hours ago