ಕ್ರೀಡೆ

ಏಷ್ಯನ್ ಗೇಮ್ಸ್ : ಉಜ್ಬೇಕಿಸ್ತಾನ ವಿರುದ್ಧ 16-0 ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ ಭಾರತ ಹಾಕಿ ತಂಡ

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್‌ನ ಮೊದಲ ಪಂದ್ಯದಲ್ಲಿ ಪುರುಷರ ಹಾಕಿ ತಂಡವು ಉಜ್ಬೇಕಿಸ್ತಾನ ವಿರುದ್ಧ 16-0 ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.

ಚೀನಾದ ಹ್ಯಾಂಗ್‌ಝೌನಲ್ಲಿರುವ ಗೊಂಗ್‌ಶು ಕೆನಾಲ್ ಸ್ಪೋರ್ಟ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯನ್ ಗೇಮ್ಸ್ 2023ರ ಪೂಲ್ ಎ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡವು ಗೋಲುಗಳ ಸುರಿಮಳೆಗೈದಿದೆ.

ಮೊದಲ ಪಂದ್ಯದಲ್ಲಿ ಉಜ್ಬೇಕಿಸ್ತಾನ್ ತಂಡವನ್ನು 16-0 ಅಂತರದಿಂದ ಸೋಲಿಸಿದೆ. ನಾಯಕ ಹರ್ವಾನ್ ಪ್ರೀತ್ ಸಿಂಗ್ ಅಲಭ್ಯತೆಯಲ್ಲಿ ಭಾರತ ಕಣಕ್ಕಿಳಿಯಿತು.

ಭಾರತದ ಪರ ಲಲಿತ್ ಉಪಾಧ್ಯಾಯ (7, 24, 37, 53ನೇ ನಿಮಿಷದಲ್ಲಿ) ಮತ್ತು ವರುಣ್ ಕುವಾರ್ (12, 36, 50, 52ನೇ ನಿಮಿಷದಲ್ಲಿ) ತಲಾ 4 ಗೋಲು ಗಳಿಸಿ ಮಿಂಚಿದರು. ಮನದೀಪ್ ಸಿಂಗ್ 3 ಗೋಲು (18, 27, 28ನೇ ನಿಮಿಷದಲ್ಲಿ), ಅಭಿಷೇಕ್ (17ನೇ ನಿ), ಅಮಿತ್ ರೋಹಿದಾಸ್ (38 ನಿ), ಸುಖಜೀತ್ (42 ನಿ), ಶಂಶೇರ್ ಸಿಂಗ್ (42’) ಮತ್ತು ಸಂಜಯ್ (‌57 ನಿ) ತಲಾ ಒಂದು ಗೋಲು ಗಳಿಸಿ ಗೆಲುವಿಗೆ ಕಾರಣರಾದರು.

ಅಗ್ರಸ್ಥಾನಕ್ಕೆ ಏರಿದ ಭಾರತ

ಈ ಸುಲಭ ಗೆಲುವಿನೊಂದಿಗೆ 3 ಬಾರಿ ಏಷ್ಯನ್ ಗೇಮ್ಸ್ ಚಾಂಪಿಯನ್ ಭಾರತವು ಏಷ್ಯನ್ ಗೇಮ್ಸ್ 2023ರ ಪುರುಷರ ಹಾಕಿ ಪೂಲ್ ಎ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿತು. ಪ್ರತಿ ಪೂಲ್‌ನ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಪ್ರವೇಶಿಸುತ್ತದೆ. ಎಫ್‌ಐಎಚ್ ಶ್ರೇಯಾಕದಲ್ಲಿ 3ನೇ ಸ್ಥಾನದಲ್ಲಿರುವ ಭಾರತದ ಪುರುಷರ ಹಾಕಿ ತಂಡವು, ಕಳೆದ ತಿಂಗಳು ತಮ್ಮ ಏಷ್ಯನ್ ಚಾಂಪಿುಂನ್ಸ್ ಟ್ರೋಫಿಗೆ ಮುತ್ತಿಕ್ಕಿತು.

ಪಂದ್ಯದ ಆರಂಭದಿಂದಲೇ ಭಾರತದ ಆಟಗಾರರು ಆಕ್ರಮಣಕಾರಿ ಆಟಕ್ಕೆ ಮುಂದಾದರು. ವಿಶ್ವದ ನಂ. 66 ಉಜ್ಬೇಕಿಸ್ತಾನ ತಂಡಕ್ಕೆ ಗೋಲು ಗಳಿಸಲು ಅವಕಾಶ ನೀಡದೆ, ಮೆನ್ ಇನ್ ಬ್ಲೂ ಗೋಲುಗಳ ಸುರಿಮಳೆಗೈದಿತು. ಇದರೊಂದಿಗೆ ಉಜ್ಬೇಕಿಸ್ತಾನ ತಂಡದ ಮೇಲೆ ಹೆಚ್ಚು ಒತ್ತಡ ಹೇರಿತು. ಪಂದ್ಯದ 7ನೇ ನಿಮಿಷದಲ್ಲಿ ಭಾರತ ಗೋಲು ಮಳೆ, ಪಂದ್ಯದ ಮುಕ್ತಾಯದವರೆಗೂ ನಿಲ್ಲಲಿಲ್ಲ.

lokesh

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

38 mins ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

1 hour ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

2 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

2 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

2 hours ago