ಕ್ರೀಡೆ

ಏಷ್ಯನ್ ಗೇಮ್ಸ್ : ಉಜ್ಬೇಕಿಸ್ತಾನ ವಿರುದ್ಧ 16-0 ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ ಭಾರತ ಹಾಕಿ ತಂಡ

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್‌ನ ಮೊದಲ ಪಂದ್ಯದಲ್ಲಿ ಪುರುಷರ ಹಾಕಿ ತಂಡವು ಉಜ್ಬೇಕಿಸ್ತಾನ ವಿರುದ್ಧ 16-0 ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.

ಚೀನಾದ ಹ್ಯಾಂಗ್‌ಝೌನಲ್ಲಿರುವ ಗೊಂಗ್‌ಶು ಕೆನಾಲ್ ಸ್ಪೋರ್ಟ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯನ್ ಗೇಮ್ಸ್ 2023ರ ಪೂಲ್ ಎ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡವು ಗೋಲುಗಳ ಸುರಿಮಳೆಗೈದಿದೆ.

ಮೊದಲ ಪಂದ್ಯದಲ್ಲಿ ಉಜ್ಬೇಕಿಸ್ತಾನ್ ತಂಡವನ್ನು 16-0 ಅಂತರದಿಂದ ಸೋಲಿಸಿದೆ. ನಾಯಕ ಹರ್ವಾನ್ ಪ್ರೀತ್ ಸಿಂಗ್ ಅಲಭ್ಯತೆಯಲ್ಲಿ ಭಾರತ ಕಣಕ್ಕಿಳಿಯಿತು.

ಭಾರತದ ಪರ ಲಲಿತ್ ಉಪಾಧ್ಯಾಯ (7, 24, 37, 53ನೇ ನಿಮಿಷದಲ್ಲಿ) ಮತ್ತು ವರುಣ್ ಕುವಾರ್ (12, 36, 50, 52ನೇ ನಿಮಿಷದಲ್ಲಿ) ತಲಾ 4 ಗೋಲು ಗಳಿಸಿ ಮಿಂಚಿದರು. ಮನದೀಪ್ ಸಿಂಗ್ 3 ಗೋಲು (18, 27, 28ನೇ ನಿಮಿಷದಲ್ಲಿ), ಅಭಿಷೇಕ್ (17ನೇ ನಿ), ಅಮಿತ್ ರೋಹಿದಾಸ್ (38 ನಿ), ಸುಖಜೀತ್ (42 ನಿ), ಶಂಶೇರ್ ಸಿಂಗ್ (42’) ಮತ್ತು ಸಂಜಯ್ (‌57 ನಿ) ತಲಾ ಒಂದು ಗೋಲು ಗಳಿಸಿ ಗೆಲುವಿಗೆ ಕಾರಣರಾದರು.

ಅಗ್ರಸ್ಥಾನಕ್ಕೆ ಏರಿದ ಭಾರತ

ಈ ಸುಲಭ ಗೆಲುವಿನೊಂದಿಗೆ 3 ಬಾರಿ ಏಷ್ಯನ್ ಗೇಮ್ಸ್ ಚಾಂಪಿಯನ್ ಭಾರತವು ಏಷ್ಯನ್ ಗೇಮ್ಸ್ 2023ರ ಪುರುಷರ ಹಾಕಿ ಪೂಲ್ ಎ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿತು. ಪ್ರತಿ ಪೂಲ್‌ನ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಪ್ರವೇಶಿಸುತ್ತದೆ. ಎಫ್‌ಐಎಚ್ ಶ್ರೇಯಾಕದಲ್ಲಿ 3ನೇ ಸ್ಥಾನದಲ್ಲಿರುವ ಭಾರತದ ಪುರುಷರ ಹಾಕಿ ತಂಡವು, ಕಳೆದ ತಿಂಗಳು ತಮ್ಮ ಏಷ್ಯನ್ ಚಾಂಪಿುಂನ್ಸ್ ಟ್ರೋಫಿಗೆ ಮುತ್ತಿಕ್ಕಿತು.

ಪಂದ್ಯದ ಆರಂಭದಿಂದಲೇ ಭಾರತದ ಆಟಗಾರರು ಆಕ್ರಮಣಕಾರಿ ಆಟಕ್ಕೆ ಮುಂದಾದರು. ವಿಶ್ವದ ನಂ. 66 ಉಜ್ಬೇಕಿಸ್ತಾನ ತಂಡಕ್ಕೆ ಗೋಲು ಗಳಿಸಲು ಅವಕಾಶ ನೀಡದೆ, ಮೆನ್ ಇನ್ ಬ್ಲೂ ಗೋಲುಗಳ ಸುರಿಮಳೆಗೈದಿತು. ಇದರೊಂದಿಗೆ ಉಜ್ಬೇಕಿಸ್ತಾನ ತಂಡದ ಮೇಲೆ ಹೆಚ್ಚು ಒತ್ತಡ ಹೇರಿತು. ಪಂದ್ಯದ 7ನೇ ನಿಮಿಷದಲ್ಲಿ ಭಾರತ ಗೋಲು ಮಳೆ, ಪಂದ್ಯದ ಮುಕ್ತಾಯದವರೆಗೂ ನಿಲ್ಲಲಿಲ್ಲ.

lokesh

Recent Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

3 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

4 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

5 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

6 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

7 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

10 hours ago