ಕ್ರೀಡೆ

ಏಷ್ಯನ್ ಗೇಮ್ಸ್‌ : ಚಿನ್ನದ ಪದಕಕ್ಕೆ ಕೊರಳೊಡ್ಡಿದ ಭಾರತೀಯ ಶೂಟರ್‌ಗಳು

ಹ್ಯಾಂಗ್ಝೌ : ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023 ಏಷ್ಯನ್ ಕ್ರೀಡಾಕೂಟದ ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್ ಕುಸಾಲೆ ಮತ್ತು ಅಖಿಲ್ ಶೆಯೋರಾನ್ ಅವರ 50 ಮೀಟರ್ ರೈಫಲ್ 3ಕೆ ಪುರುಷರ ಭಾರತ ತಂಡವು ಚಿನ್ನದ ಪದಕವನ್ನು ಗೆದ್ದುಕೊಂಡಿತು.

2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಶೂಟಿಂಗ್‍ನಲ್ಲಿ ಇದು 15ನೇ ಪದಕ ಮತ್ತು 7ನೇ ಚಿನ್ನವಾಗಿದೆ. ಭಾರತವು 1769 ಅಂಕಗಳ ಗಮನಾರ್ಹ ಅಂಕಗಳಿಸಿತು, ಕಳೆದ ವರ್ಷ ಪೆರುವಿನಲ್ಲಿ ಯುಎಸ್‍ಎನ ಹಿಂದಿನ ದಾಖಲೆಯನ್ನು 8 ಅಂಕಗಳಿಂದ ಮೀರಿಸಿದೆ.

ಗ್ರೂಪ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸುವುದರೊಂದಿಗೆ ಇಶಾ ಮತ್ತು ಪಾಲಕ್ ವೈಯಕ್ತಿಕ ಸ್ಪರ್ಧೆಯಲ್ಲೂ ಫೈನಲ್ ತಲುಪಿದ್ದಾರೆ. 10 ವರ್ಷದ ಇಶಾ ಸಿಂಗ್ ಈಗ ಏಷ್ಯನ್ ಗೇಮ್ಸ್ 2023 ರಲ್ಲಿ ತನ್ನ ನಾಲ್ಕನೇ ಪದಕ ಗೆಲ್ಲುವ ಅವಕಾಶವನ್ನು ಹೊಂದಿದ್ದಾರೆ. ಈ ಹಿಂದೆ 25 ಮೀಟರ್ ಪಿಸ್ತೂಲ್ ಟೀಮ್ ವಿಭಾಗದಲ್ಲಿ ಚಿನ್ನ ಹಾಗೂ ವೈಯಕ್ತಿಕ ವಿಭಾಗದಲ್ಲಿ ಬೆಳ್ಳಿ ಗೆದ್ದಿದ್ದರು.

ಚೀನಾದ ಹ್ಯಾಂಗ್‍ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ವನಿತೆಯರ ತಂಡವನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿಯವರು, ಏಷ್ಯನ್ ಗೇಮ್ಸ್ ನಲ್ಲಿ ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ದಿವ್ಯಾ ತಾಡಿಗೋಳ್, ಇಶಾ ಸಿಂಗ್ ಮತ್ತು ಪಾಲಕ್ ಅವರಿಗೆ ಅಭಿನಂದನೆಗಳು.

lokesh

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago