ಕ್ರೀಡೆ

ಏಷ್ಯನ್ ಗೇಮ್ಸ್‌ : ಚಿನ್ನದ ಪದಕಕ್ಕೆ ಕೊರಳೊಡ್ಡಿದ ಭಾರತೀಯ ಶೂಟರ್‌ಗಳು

ಹ್ಯಾಂಗ್ಝೌ : ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023 ಏಷ್ಯನ್ ಕ್ರೀಡಾಕೂಟದ ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್ ಕುಸಾಲೆ ಮತ್ತು ಅಖಿಲ್ ಶೆಯೋರಾನ್ ಅವರ 50 ಮೀಟರ್ ರೈಫಲ್ 3ಕೆ ಪುರುಷರ ಭಾರತ ತಂಡವು ಚಿನ್ನದ ಪದಕವನ್ನು ಗೆದ್ದುಕೊಂಡಿತು.

2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಶೂಟಿಂಗ್‍ನಲ್ಲಿ ಇದು 15ನೇ ಪದಕ ಮತ್ತು 7ನೇ ಚಿನ್ನವಾಗಿದೆ. ಭಾರತವು 1769 ಅಂಕಗಳ ಗಮನಾರ್ಹ ಅಂಕಗಳಿಸಿತು, ಕಳೆದ ವರ್ಷ ಪೆರುವಿನಲ್ಲಿ ಯುಎಸ್‍ಎನ ಹಿಂದಿನ ದಾಖಲೆಯನ್ನು 8 ಅಂಕಗಳಿಂದ ಮೀರಿಸಿದೆ.

ಗ್ರೂಪ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸುವುದರೊಂದಿಗೆ ಇಶಾ ಮತ್ತು ಪಾಲಕ್ ವೈಯಕ್ತಿಕ ಸ್ಪರ್ಧೆಯಲ್ಲೂ ಫೈನಲ್ ತಲುಪಿದ್ದಾರೆ. 10 ವರ್ಷದ ಇಶಾ ಸಿಂಗ್ ಈಗ ಏಷ್ಯನ್ ಗೇಮ್ಸ್ 2023 ರಲ್ಲಿ ತನ್ನ ನಾಲ್ಕನೇ ಪದಕ ಗೆಲ್ಲುವ ಅವಕಾಶವನ್ನು ಹೊಂದಿದ್ದಾರೆ. ಈ ಹಿಂದೆ 25 ಮೀಟರ್ ಪಿಸ್ತೂಲ್ ಟೀಮ್ ವಿಭಾಗದಲ್ಲಿ ಚಿನ್ನ ಹಾಗೂ ವೈಯಕ್ತಿಕ ವಿಭಾಗದಲ್ಲಿ ಬೆಳ್ಳಿ ಗೆದ್ದಿದ್ದರು.

ಚೀನಾದ ಹ್ಯಾಂಗ್‍ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ವನಿತೆಯರ ತಂಡವನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿಯವರು, ಏಷ್ಯನ್ ಗೇಮ್ಸ್ ನಲ್ಲಿ ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. 10 ಮೀಟರ್ ಏರ್ ಪಿಸ್ತೂಲ್ ಮಹಿಳಾ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ದಿವ್ಯಾ ತಾಡಿಗೋಳ್, ಇಶಾ ಸಿಂಗ್ ಮತ್ತು ಪಾಲಕ್ ಅವರಿಗೆ ಅಭಿನಂದನೆಗಳು.

lokesh

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

6 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

6 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

6 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

8 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

10 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

11 hours ago