ಕ್ರೀಡೆ

ಏಷ್ಯನ್‌ ಗೇಮ್ಸ್‌: ಲಂಕಾ ವಿರುದ್ದ ಗೆದ್ದು ಚಿನ್ನಕ್ಕೆ ಮುತ್ತಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ!

ಹಾಂಗ್‌ಝೌ : ಭಾರತ ಮಹಿಳಾ ಕ್ರಿಕೆಟ್‌ ತಂಡ ಏಷ್ಯನ್‌ ಗೇಮ್ಸ್‌ 2023 ಕ್ರೀಡಾಕೂಟದಲ್ಲಿ ಸ್ವರ್ಣ ಪದಕ ಗೆದ್ದಿದೆ.

ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಸೋಮವಾರ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ 19 ರನ್‌ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿ ಸ್ವರ್ಣ ಪದಕಕ್ಕೆ ಕೊರಳೊಡ್ಡಿತು.

ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಭಾರತ ತಂಡ ಬೌಲಿಂಗ್‌ ಸ್ನೇಹಿ ಪಿಚ್‌ನಲ್ಲಿ ಬ್ಯಾಟ್‌ ಮಾಡಲು ಬಹಳಾ ಕಷ್ಟ ಪಟ್ಟಿತು. ಸ್ಟಾರ್‌ ಓಪನರ್‌ ಶಫಾಲಿ ವರ್ಮಾ ಮತ್ತೊಮ್ಮೆ ಕೈಕೊಟ್ಟರು. ಆದರೂ ಅನುಭವಿಗಳಾದ ಸ್ಮೃತಿ ಮಂಧಾನಾ (46) ಮತ್ತು ಜೆಮಿಮಾ ರೊಡ್ರಿಗಸ್‌ (42) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತಂಡದ ಮೊತ್ತವನ್ನು 100ರ ಗಡಿ ದಾಟಿಸಿದರು. ಈ ಜೋಡಿ 2ನೇ ವಿಕೆಟ್‌ಗೆ 73 ರನ್‌ಗಳ ಜೊತೆಯಾಟವಾಡಿತು.
ಆದರೆ ಇನಿಂಗ್ಸ್‌ ಮಧ್ಯದಲ್ಲಿ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ವಿಭಾಗ ಕೈಕೊಟ್ಟಿತು. ನಾಯಕಿ ಹರ್ಮನ್‌ಪ್ರೀತ್‌ ಕೌರ್‌ (2) ವಿಕೆಟ್‌ ಕೈಚೆಲ್ಲಿದರು. ರಿಚಾ ಘೋಶ್‌ (9) ಮತ್ತು ಪೂಜಾ ವಸ್ತ್ರಕಾರ್‌ (2) ಸ್ಕೋರ್‌ ಮಾಡಲು ವಿಫಲರಾದರು. ಭಾರತ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 116 ರನ್‌ಗಳ ಸಾಧಾರಣ ಮೊತ್ತ ಮಾತ್ರವೇ ಕಲೆಹಾಕಿತು.
ಶ್ರೀಲಂಕಾ ತಂಡದ ಪರ ಪ್ರಭೋದಿನಿ, ಸುಗಂದಿಕಾ ಕುಮಾರಿ, ಮತ್ತು ರಣವೀರಾ ತಲಾ 2 ವಿಕೆಟ್‌ ಪಡೆದರು.
ಗೆಲುವಿಗೆ 117 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ್ದ ಶ್ರೀಲಂಕಾ ತಂಡ 14ಕ್ಕೆ 3 ವಿಕೆಟ್‌ ಕಳೆದುಕೊಂಡು ಆಘಾತಕ್ಕೀಡಾಯಿತು. ಸ್ಟಾರ್‌ ಓಪನರ್‌ ಚಾಮರಿ ಅಟಪಟ್ಟು (12) ಬೇಗ ನಿರ್ಗಮಿಸಿದರು. ಇನಿಂಗ್ಸ್‌ ಮಧ್ಯದಲ್ಲಿ ಹಾಸಿನಿ ಪೆರೆರಾ (25) ಮತ್ತು ನೀಲಾಕ್ಷಿ ಡಿಸಿಲ್ವಾ (23) ಕೊಂಚ ಹೋರಾಟ ನಡೆಸಿದರು. ಆದರೆ ಭಾರತೀಯ ಬೌಲರ್‌ ಮುಂದೆ ಮಂಕಾದರು.
ಭಾರತದ ಪರ ವೇಗಿ ಟಿಟಾಸ್‌ ಸಾಧು 6ಕ್ಕೆ 3 ವಿಕೆಟ್‌ ಪಡೆದು ಲಂಕಾ ತಂಡವನ್ನು ಕಾಡಿದರು. ಅವರಿಗೆ ರಾಜೇಶ್ವರಿ ಗಾಯಕ್ವಾಡ್‌ (20ಕ್ಕೆ 2) ಸಾಥ್‌ ನೀಡಿದರು.
ಈ ಗೆಲುವಿನೊಂದಿಗೆ ಭಾರತೀಯ ವನಿತೆಯರು ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಅತ್ತ ರನ್ನರ್ ಅಪ್ ಆಗಿ ಶ್ರೀಲಂಕಾ ತಂಡ ಬೆಳ್ಳಿ ಪದಕ ಗೆದ್ದರೆ, 3ನೇ ಸ್ಥಾನ ಪಡೆದಿರುವ ಬಾಂಗ್ಲಾದೇಶ್ ಮಹಿಳಾ ತಂಡ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದೆ.
ಇದು 2023ರ ಸಾಲಿನ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಸಿಕ್ಕ ಎರಡನೇ ಚಿನ್ನದ ಪದಕವಾಗಿದೆ.
andolanait

Recent Posts

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

25 mins ago

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಮಗ್ರ ಓದಿಗೆ ಒತ್ತು ನೀಡಿ : ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…

46 mins ago

ಸಾಮರ್ಥ್ಯ ವೃದ್ಧಿಗೆ ಎಐ ಬಳಸಿಕೊಳ್ಳಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…

59 mins ago

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

3 hours ago

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

3 hours ago

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

3 hours ago