ಕ್ರೀಡೆ

ಏಷ್ಯನ್‌ ಗೇಮ್ಸ್‌: ಲಂಕಾ ವಿರುದ್ದ ಗೆದ್ದು ಚಿನ್ನಕ್ಕೆ ಮುತ್ತಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ!

ಹಾಂಗ್‌ಝೌ : ಭಾರತ ಮಹಿಳಾ ಕ್ರಿಕೆಟ್‌ ತಂಡ ಏಷ್ಯನ್‌ ಗೇಮ್ಸ್‌ 2023 ಕ್ರೀಡಾಕೂಟದಲ್ಲಿ ಸ್ವರ್ಣ ಪದಕ ಗೆದ್ದಿದೆ.

ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಸೋಮವಾರ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ 19 ರನ್‌ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿ ಸ್ವರ್ಣ ಪದಕಕ್ಕೆ ಕೊರಳೊಡ್ಡಿತು.

ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಭಾರತ ತಂಡ ಬೌಲಿಂಗ್‌ ಸ್ನೇಹಿ ಪಿಚ್‌ನಲ್ಲಿ ಬ್ಯಾಟ್‌ ಮಾಡಲು ಬಹಳಾ ಕಷ್ಟ ಪಟ್ಟಿತು. ಸ್ಟಾರ್‌ ಓಪನರ್‌ ಶಫಾಲಿ ವರ್ಮಾ ಮತ್ತೊಮ್ಮೆ ಕೈಕೊಟ್ಟರು. ಆದರೂ ಅನುಭವಿಗಳಾದ ಸ್ಮೃತಿ ಮಂಧಾನಾ (46) ಮತ್ತು ಜೆಮಿಮಾ ರೊಡ್ರಿಗಸ್‌ (42) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತಂಡದ ಮೊತ್ತವನ್ನು 100ರ ಗಡಿ ದಾಟಿಸಿದರು. ಈ ಜೋಡಿ 2ನೇ ವಿಕೆಟ್‌ಗೆ 73 ರನ್‌ಗಳ ಜೊತೆಯಾಟವಾಡಿತು.
ಆದರೆ ಇನಿಂಗ್ಸ್‌ ಮಧ್ಯದಲ್ಲಿ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ವಿಭಾಗ ಕೈಕೊಟ್ಟಿತು. ನಾಯಕಿ ಹರ್ಮನ್‌ಪ್ರೀತ್‌ ಕೌರ್‌ (2) ವಿಕೆಟ್‌ ಕೈಚೆಲ್ಲಿದರು. ರಿಚಾ ಘೋಶ್‌ (9) ಮತ್ತು ಪೂಜಾ ವಸ್ತ್ರಕಾರ್‌ (2) ಸ್ಕೋರ್‌ ಮಾಡಲು ವಿಫಲರಾದರು. ಭಾರತ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 116 ರನ್‌ಗಳ ಸಾಧಾರಣ ಮೊತ್ತ ಮಾತ್ರವೇ ಕಲೆಹಾಕಿತು.
ಶ್ರೀಲಂಕಾ ತಂಡದ ಪರ ಪ್ರಭೋದಿನಿ, ಸುಗಂದಿಕಾ ಕುಮಾರಿ, ಮತ್ತು ರಣವೀರಾ ತಲಾ 2 ವಿಕೆಟ್‌ ಪಡೆದರು.
ಗೆಲುವಿಗೆ 117 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ್ದ ಶ್ರೀಲಂಕಾ ತಂಡ 14ಕ್ಕೆ 3 ವಿಕೆಟ್‌ ಕಳೆದುಕೊಂಡು ಆಘಾತಕ್ಕೀಡಾಯಿತು. ಸ್ಟಾರ್‌ ಓಪನರ್‌ ಚಾಮರಿ ಅಟಪಟ್ಟು (12) ಬೇಗ ನಿರ್ಗಮಿಸಿದರು. ಇನಿಂಗ್ಸ್‌ ಮಧ್ಯದಲ್ಲಿ ಹಾಸಿನಿ ಪೆರೆರಾ (25) ಮತ್ತು ನೀಲಾಕ್ಷಿ ಡಿಸಿಲ್ವಾ (23) ಕೊಂಚ ಹೋರಾಟ ನಡೆಸಿದರು. ಆದರೆ ಭಾರತೀಯ ಬೌಲರ್‌ ಮುಂದೆ ಮಂಕಾದರು.
ಭಾರತದ ಪರ ವೇಗಿ ಟಿಟಾಸ್‌ ಸಾಧು 6ಕ್ಕೆ 3 ವಿಕೆಟ್‌ ಪಡೆದು ಲಂಕಾ ತಂಡವನ್ನು ಕಾಡಿದರು. ಅವರಿಗೆ ರಾಜೇಶ್ವರಿ ಗಾಯಕ್ವಾಡ್‌ (20ಕ್ಕೆ 2) ಸಾಥ್‌ ನೀಡಿದರು.
ಈ ಗೆಲುವಿನೊಂದಿಗೆ ಭಾರತೀಯ ವನಿತೆಯರು ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಅತ್ತ ರನ್ನರ್ ಅಪ್ ಆಗಿ ಶ್ರೀಲಂಕಾ ತಂಡ ಬೆಳ್ಳಿ ಪದಕ ಗೆದ್ದರೆ, 3ನೇ ಸ್ಥಾನ ಪಡೆದಿರುವ ಬಾಂಗ್ಲಾದೇಶ್ ಮಹಿಳಾ ತಂಡ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದೆ.
ಇದು 2023ರ ಸಾಲಿನ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಸಿಕ್ಕ ಎರಡನೇ ಚಿನ್ನದ ಪದಕವಾಗಿದೆ.
andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

10 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

14 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

14 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

15 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

16 hours ago