ಕ್ರೀಡೆ

ಏಷ್ಯನ್ ಗೇಮ್ಸ್: ಗಾಲ್ಫ್‌ನಲ್ಲಿ ಬೆಳ್ಳಿ ಗೆದ್ದ ಕರ್ನಾಟಕದ ಅದಿತಿ ಅಶೋಕ್

ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ.

ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ಗಾಲ್ಫ್‌ ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಅದಿತಿ ಅಶೋಕ್ ಪಾತ್ರರಾಗಿದ್ದಾರೆ.

ಶನಿವಾರ 3ನೇ ಸುತ್ತಿನ ಪಂದ್ಯದ ಬಳಿಕ ಅದಿತಿ ಚಿನ್ನ ಗಳಿಸಲು ಹೆಜ್ಜೆಯಿಟ್ಟಿದ್ದರು. 7 ಸ್ಟ್ರೋಕ್ ಮುನ್ನಡೆಯೊಂದಿಗೆ ಆಟವನ್ನು ಆರಂಭಿಸಿದ ಅವರಿಗೆ ಮೊದಲ ಸ್ಥಾನವನ್ನು ಗಳಿಸಲು ಉತ್ತಮ ಅವಕಾಶವಿತ್ತು. ಆದರೆ ಕೊನೆಯ 3 ಹೊಡೆತದಲ್ಲಿ ಹಿನ್ನಡೆ ಅನುಭವಿಸಿ ಅವರು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಥೈಲ್ಯಾಂಡ್‌ನ ಅರ್ಪಿಚುಯಾ ಯುಬೋಲ್ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ.

ಈ ಹಿಂದೆ ಅದಿತಿ ಅಶೋಕ್ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗಾಲ್ಫ್‌ನಲ್ಲಿ 4ನೇ ಸ್ಥಾನ ಗಳಿಸಿ ದೇಶದ ಗಮನ ಸೆಳೆದಿದ್ದರು. ಇದೀಗ ಏಷ್ಯನ್ ಗೇಮ್ಸ್‌ನಲ್ಲಿ ಅದಿತಿ ಪದಕ ಗೆದ್ದು ಬೀಗಿದ್ದಾರೆ.

andolanait

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

2 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

2 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

2 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

2 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

2 hours ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

2 hours ago