ಕ್ರೀಡೆ

ಏಷ್ಯನ್ ಗೇಮ್ಸ್: ಗಾಲ್ಫ್‌ನಲ್ಲಿ ಬೆಳ್ಳಿ ಗೆದ್ದ ಕರ್ನಾಟಕದ ಅದಿತಿ ಅಶೋಕ್

ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ.

ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ಗಾಲ್ಫ್‌ ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಅದಿತಿ ಅಶೋಕ್ ಪಾತ್ರರಾಗಿದ್ದಾರೆ.

ಶನಿವಾರ 3ನೇ ಸುತ್ತಿನ ಪಂದ್ಯದ ಬಳಿಕ ಅದಿತಿ ಚಿನ್ನ ಗಳಿಸಲು ಹೆಜ್ಜೆಯಿಟ್ಟಿದ್ದರು. 7 ಸ್ಟ್ರೋಕ್ ಮುನ್ನಡೆಯೊಂದಿಗೆ ಆಟವನ್ನು ಆರಂಭಿಸಿದ ಅವರಿಗೆ ಮೊದಲ ಸ್ಥಾನವನ್ನು ಗಳಿಸಲು ಉತ್ತಮ ಅವಕಾಶವಿತ್ತು. ಆದರೆ ಕೊನೆಯ 3 ಹೊಡೆತದಲ್ಲಿ ಹಿನ್ನಡೆ ಅನುಭವಿಸಿ ಅವರು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಥೈಲ್ಯಾಂಡ್‌ನ ಅರ್ಪಿಚುಯಾ ಯುಬೋಲ್ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ.

ಈ ಹಿಂದೆ ಅದಿತಿ ಅಶೋಕ್ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗಾಲ್ಫ್‌ನಲ್ಲಿ 4ನೇ ಸ್ಥಾನ ಗಳಿಸಿ ದೇಶದ ಗಮನ ಸೆಳೆದಿದ್ದರು. ಇದೀಗ ಏಷ್ಯನ್ ಗೇಮ್ಸ್‌ನಲ್ಲಿ ಅದಿತಿ ಪದಕ ಗೆದ್ದು ಬೀಗಿದ್ದಾರೆ.

andolanait

Recent Posts

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

16 mins ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

2 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

2 hours ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

3 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

4 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

4 hours ago