ಕ್ರೀಡೆ

ಏಷ್ಯನ್ ಗೇಮ್ಸ್: ಗಾಲ್ಫ್‌ನಲ್ಲಿ ಬೆಳ್ಳಿ ಗೆದ್ದ ಕರ್ನಾಟಕದ ಅದಿತಿ ಅಶೋಕ್

ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ.

ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ಗಾಲ್ಫ್‌ ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಅದಿತಿ ಅಶೋಕ್ ಪಾತ್ರರಾಗಿದ್ದಾರೆ.

ಶನಿವಾರ 3ನೇ ಸುತ್ತಿನ ಪಂದ್ಯದ ಬಳಿಕ ಅದಿತಿ ಚಿನ್ನ ಗಳಿಸಲು ಹೆಜ್ಜೆಯಿಟ್ಟಿದ್ದರು. 7 ಸ್ಟ್ರೋಕ್ ಮುನ್ನಡೆಯೊಂದಿಗೆ ಆಟವನ್ನು ಆರಂಭಿಸಿದ ಅವರಿಗೆ ಮೊದಲ ಸ್ಥಾನವನ್ನು ಗಳಿಸಲು ಉತ್ತಮ ಅವಕಾಶವಿತ್ತು. ಆದರೆ ಕೊನೆಯ 3 ಹೊಡೆತದಲ್ಲಿ ಹಿನ್ನಡೆ ಅನುಭವಿಸಿ ಅವರು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಥೈಲ್ಯಾಂಡ್‌ನ ಅರ್ಪಿಚುಯಾ ಯುಬೋಲ್ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ.

ಈ ಹಿಂದೆ ಅದಿತಿ ಅಶೋಕ್ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗಾಲ್ಫ್‌ನಲ್ಲಿ 4ನೇ ಸ್ಥಾನ ಗಳಿಸಿ ದೇಶದ ಗಮನ ಸೆಳೆದಿದ್ದರು. ಇದೀಗ ಏಷ್ಯನ್ ಗೇಮ್ಸ್‌ನಲ್ಲಿ ಅದಿತಿ ಪದಕ ಗೆದ್ದು ಬೀಗಿದ್ದಾರೆ.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

8 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

8 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

8 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

8 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

8 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

8 hours ago