ಕ್ರೀಡೆ

ಏಶ್ಯನ್ ಗೇಮ್ಸ್: ಪುರುಷರ 10 ಮೀ. ಏರ್ ಪಿಸ್ತೂಲ್ ಶೂಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ

ಹಾಂಗ್‌ಝೌ: ಏಶ್ಯನ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, 10 ಮೀಟರ್ಸ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಪುರುಷರ ತಂಡವು ಚಿನ್ನ ಗೆದ್ದಿದೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತ ನಾಲ್ಕನೇ ಚಿನ್ನದ ಪದಕ ಗೆದ್ದಿದೆ.

ಸರಬ್ಬೋತ್ ಸಿಂಗ್, ಅರ್ಜುನ್ ಸಿಂಗ್ ಚೀಮಾ ಮತ್ತು ಶಿವ ನರ್ವಾಲ್ ಅವರ ತಂಡವು ಚೀನಾ ತಂಡವನ್ನು ಸೋಲಿಸುವ ಮೂಲಕ ಪದಕ ಜಯಿಸಿತು. ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನದ ಪದಕವನ್ನು ಗಳಿಸಿಕೊಟ್ಟಿತು.

ಭಾರತದ ತಂಡವು ಒಟ್ಟು 1734 ಅಂಕಗಳನ್ನು ಪಡೆಯುವ ಮೂಲಕ ಚೀನೀ ತಂಡಕ್ಕೆ ಕೇವಲ ಒಂದು ಅಂಕದಿಂದ ಸೋಲುಣಿಸಿತು. ವಿಯೆಟ್ನಾಂ 1730 ಅಂಕಗಳೊಂದಿಗೆ ಕಂಚಿನ ಪದಕ ಗೆದ್ದಿತು.

ಸರಬೋತ್ ಮತ್ತು ಅರ್ಜುನ್ ಎಂಟು ಶೂಟರ್‌ಗಳ ಫೈನಲ್‌ಗೂ ಪ್ರವೇಶಿಸಿದ್ದು, ವೈಯಕ್ತಿಕ ಪದಕಗಳಿಗೂ ಸ್ಪರ್ಧೆಯಲ್ಲಿದ್ದಾರೆ.

ಭಾರತದ ಶೂಟರ್‌ಗಳು ಇದುವರೆಗೆ ನಾಲ್ಕು ಚಿನ್ನ, ನಾಲ್ಕು ಬೆಳ್ಳಿ ಮತ್ತು ಐದು ಕಂಚಿನ ಪದಕಗಳನ್ನು ಗೆದ್ದಿದ್ದಾರೆ.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

27 seconds ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

29 mins ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

2 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

2 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

2 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

10 hours ago